10:11 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಡಿಸೆಂಬರ್ 21ರಿಂದ ಕರಾವಳಿ ಉತ್ಸವ; 28, 29ರಂದು ಬೀಚ್ ಉತ್ಸವ; ಜನವರಿ 4 ಮತ್ತು 5ರಂದು ಯುವ ಉತ್ಸವ

09/12/2024, 21:35

ಮಂಗಳೂರು(reporterkarnataka.com): ಬಹುನಿರೀಕ್ಷಿತ ಕರಾವಳಿ ಉತ್ಸವವು ಡಿಸೆಂಬರ್ 21ರಿಂದ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.
ಡಿಸೆಂಬರ್ 21ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಂಸ್ಕøತಿಕ ವೈಭವವನ್ನು ಪ್ರದರ್ಶಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಸ್ಕøತಿ, ಭಾಷೆ, ವೈವಿಧ್ಯಮಯ ಆಚರಣೆಗಳನ್ನು ಪ್ರದರ್ಶಿಸಬೇಕು. ವಿವಿಧ ಅಕಾಡೆಮಿಗಳೊಂದಿಗೆ ಸೇರಿ ಕಾರ್ಯಕ್ರಮ ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಡಿಸೆಂಬರ್ 28 ಹಾಗೂ 29ರಂದು ಪಣಂಬೂರು/ತಣ್ಣೀರುಬಾವಿ ಬೀಚ್‍ನಲ್ಲಿ ಬೀಚ್ ಉತ್ಸವ ನಡೆಯಲಿದೆ. ಜನವರಿ 4 ಮತ್ತು 5 ರಂದು ಕದ್ರಿಪಾರ್ಕ್‍ನಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿ, ಯುವ ಸಮೂಹದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮ “ಯುವ ಉತ್ಸವ” ನಡೆಯಲಿದೆ. ಜನವರಿ 17 ಮತ್ತು 18 ರಂದು ಆಕರ್ಷಕ ಗಾಳಿಪಟ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ. ವೈವಿಧ್ಯಮಯ ತಿಂಡಿ-ತಿನಿಸುಗಳ ಆಹಾರ ಮೇಳವನ್ನು ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಪ್ರಕೃತಿ ಮತ್ತು ನದಿ ನೀರು ಸೌಂದರ್ಯವನ್ನು ಆಸ್ವಾಧಿಸಲು ನದಿ ಉತ್ಸವ ಕಾರ್ಯಕ್ರಮವನ್ನು ಹರೇಕಳದಲ್ಲಿ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕರಾವಳಿ ಉತ್ಸವ ಯಶಸ್ವಿಗೊಳಿಸಲು ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ತಕ್ಷಣದಿಂದಲೇ ಸಮಿತಿಯವರು ಕಾರ್ಯಪ್ರವೃತ್ತರಾಗಿ ಸಾಗಬೇಕೆಂದು ಅವರು ಸೂಚಿಸಿದರು.
ಈ ಸಲ ಕರಾವಳಿ ಉತ್ಸವದಲ್ಲಿ ಹಿಂದಿಗಿಂತಲೂ ವಿಭಿನ್ನವಾಗಿ ಜನಾಕರ್ಷಣೆಯ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ವೃತ್ತಿಪರ ಕಲಾಸಾಧಕರನ್ನು ಒಳಗೊಂಡ ಕಾರ್ಯಕ್ರಮದ ರೂಪುರೇಷೆ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ., ಡಿಸಿಪಿ ಸಿದ್ದಾರ್ಥ್ ಗೋಯಲ್, ಹೆಚ್ಚುವರಿ ಪೊಲೀಸು ವರಿಷ್ಠಾಧಿಕಾರಿ ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಮುಡಾ ಆಯುಕ್ತ ನೂರ್ ಜಹಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು