10:41 AM Tuesday9 - June 2026
ಬ್ರೇಕಿಂಗ್ ನ್ಯೂಸ್
ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ…

ಇತ್ತೀಚಿನ ಸುದ್ದಿ

ಡಿಸೆಂಬರ್ 21ರಿಂದ ಕರಾವಳಿ ಉತ್ಸವ; 28, 29ರಂದು ಬೀಚ್ ಉತ್ಸವ; ಜನವರಿ 4 ಮತ್ತು 5ರಂದು ಯುವ ಉತ್ಸವ

09/12/2024, 21:35

ಮಂಗಳೂರು(reporterkarnataka.com): ಬಹುನಿರೀಕ್ಷಿತ ಕರಾವಳಿ ಉತ್ಸವವು ಡಿಸೆಂಬರ್ 21ರಿಂದ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.
ಡಿಸೆಂಬರ್ 21ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಂಸ್ಕøತಿಕ ವೈಭವವನ್ನು ಪ್ರದರ್ಶಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಸ್ಕøತಿ, ಭಾಷೆ, ವೈವಿಧ್ಯಮಯ ಆಚರಣೆಗಳನ್ನು ಪ್ರದರ್ಶಿಸಬೇಕು. ವಿವಿಧ ಅಕಾಡೆಮಿಗಳೊಂದಿಗೆ ಸೇರಿ ಕಾರ್ಯಕ್ರಮ ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಡಿಸೆಂಬರ್ 28 ಹಾಗೂ 29ರಂದು ಪಣಂಬೂರು/ತಣ್ಣೀರುಬಾವಿ ಬೀಚ್‍ನಲ್ಲಿ ಬೀಚ್ ಉತ್ಸವ ನಡೆಯಲಿದೆ. ಜನವರಿ 4 ಮತ್ತು 5 ರಂದು ಕದ್ರಿಪಾರ್ಕ್‍ನಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿ, ಯುವ ಸಮೂಹದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮ “ಯುವ ಉತ್ಸವ” ನಡೆಯಲಿದೆ. ಜನವರಿ 17 ಮತ್ತು 18 ರಂದು ಆಕರ್ಷಕ ಗಾಳಿಪಟ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ. ವೈವಿಧ್ಯಮಯ ತಿಂಡಿ-ತಿನಿಸುಗಳ ಆಹಾರ ಮೇಳವನ್ನು ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಪ್ರಕೃತಿ ಮತ್ತು ನದಿ ನೀರು ಸೌಂದರ್ಯವನ್ನು ಆಸ್ವಾಧಿಸಲು ನದಿ ಉತ್ಸವ ಕಾರ್ಯಕ್ರಮವನ್ನು ಹರೇಕಳದಲ್ಲಿ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕರಾವಳಿ ಉತ್ಸವ ಯಶಸ್ವಿಗೊಳಿಸಲು ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ತಕ್ಷಣದಿಂದಲೇ ಸಮಿತಿಯವರು ಕಾರ್ಯಪ್ರವೃತ್ತರಾಗಿ ಸಾಗಬೇಕೆಂದು ಅವರು ಸೂಚಿಸಿದರು.
ಈ ಸಲ ಕರಾವಳಿ ಉತ್ಸವದಲ್ಲಿ ಹಿಂದಿಗಿಂತಲೂ ವಿಭಿನ್ನವಾಗಿ ಜನಾಕರ್ಷಣೆಯ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ವೃತ್ತಿಪರ ಕಲಾಸಾಧಕರನ್ನು ಒಳಗೊಂಡ ಕಾರ್ಯಕ್ರಮದ ರೂಪುರೇಷೆ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ., ಡಿಸಿಪಿ ಸಿದ್ದಾರ್ಥ್ ಗೋಯಲ್, ಹೆಚ್ಚುವರಿ ಪೊಲೀಸು ವರಿಷ್ಠಾಧಿಕಾರಿ ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಮುಡಾ ಆಯುಕ್ತ ನೂರ್ ಜಹಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು