11:16 PM Tuesday21 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ದೀಪಾವಳಿಗೆ ಬಡವರ ಬಾಳಲ್ಲಿ ಖುಷಿ ಮೂಡಿಸಿದ ರವಿ ಪೂಜಾರಿ: ನಿರ್ಗತಿಕರಿಗೆ ಉಚಿತವಾಗಿ ಬಟ್ಟೆ ವಿತರಣೆ

06/11/2024, 21:40

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿಯ ಆರ್‌.ಎಸ್.ಪಿ. ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ರವಿ ಪೂಜಾರಿ ಅವರು ದೀಪಾವಳಿ ಶುಭ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನದ ಹತ್ತಿರದಲ್ಲಿನ ನಿರ್ಗತಿಕರು, ಬಡವರು ಹಾಗೂ ಕೆಇಬಿ ಕಾರ್ಮಿಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಿದರು.


ಬಟ್ಟೆಗಳನ್ನು ವಿತರಿಸಿ ಮಾತನಾಡಿದ ರವಿ ಪೂಜಾರಿ, ನಾನು ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಡವರ ಬಾಳಲ್ಲಿ ಖುಷಿ ಮೂಡಿಸಿ, ಅವರು ಸಂತೋಷದಿಂದ ಹಬ್ಬವನ್ನು ಆಚರಿಸಲು ಸಹಾಯ, ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ಅಥಣಿ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಸಂಚರಿಸಿ ನಿರ್ಗತಿಕರಿಗೆ, ಬಡವರಿಗೆ ಬಟ್ಟೆಗಳನ್ನು ವಿತರಿಸುತ್ತ ಬಂದಿದ್ದೇನೆ. ಬಡವರಿಗೆ ಅನ್ನದಾಸೋಹ, ದಾನ, ಧರ್ಮ ಮಾಡುವ ಮೂಲಕ ಜನ ಸೇವೆಯ ಕಾರ್ಯ ಮಾಡುತ್ತಿದ್ದೇನೆ. ಪ್ರತಿ ವರ್ಷದಂತೆ ಈ ವರ್ಷವೂ ಬಟ್ಟೆಗಳನ್ನು ವಿತರಿಸುತ್ತಿದ್ದೇನೆ. ಸಮಾಜಮುಖಿ ಕಾರ್ಯಗಳು, ಬಡ ಜನರ ಸೇವೆಯಲ್ಲಿ ಸಾರ್ಥಕತೆ ಕಾಣುವ ಉದ್ದೇಶದಿಂದ ಈಗಾಗಲೇ ನಾನು ಅಥಣಿ ಪಟ್ಟಣದಲ್ಲಿ ಪ್ರಾರಂಭಿಸಿರುವ ಸಂಚಾರಿ ವಾಹನದ ಮೂಲಕ ನಿತ್ಯ ಅನ್ನದಾಸೋಹ ಹಾಗೂ ಬಡವರಿಗೆ ಉಚಿತ ಆಂಬ್ಯುಲೆನ್ಸ್‌ ಸೇವೆಗೆ ಇತ್ತೀಚೆಗೆ ಒಂದು ವರ್ಷ ಪೂರ್ಣಗೊಂಡಿದೆ ಎಂದು ಇದೇ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.
ನಾನು ಬಡ ಕುಟುಂಬದಿಂದ ಬಂದವನಾಗಿದ್ದು ಬಡ ಜನರ ಬದುಕಿನ ಸಂಕಷ್ಟಗಳನ್ನು ಅರಿತಿದ್ದೇನೆ. ಆದ್ದರಿಂದ ನನ್ನ ಕೈಲಾದಷ್ಟು ಅಂಥವರಿಗೆ ಸಹಾಯ ಸಹಕಾರ ಮಾಡಬೇಕು ಎಂಬ ಮಹಾದಾಸೆಯಿಂದ ಹಾಗೂ ನನ್ನ ಆತ್ಮತೃಪ್ತಿಗಾಗಿ ಇಂತಹ ಸಮಾಜ ಸೇವಾ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ ಎಂದು ರವಿ ಪೂಜಾರಿ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರಶಾಂತ ತೋಡಕರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು