7:08 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ದೀಪಾವಳಿಗೆ ಬಡವರ ಬಾಳಲ್ಲಿ ಖುಷಿ ಮೂಡಿಸಿದ ರವಿ ಪೂಜಾರಿ: ನಿರ್ಗತಿಕರಿಗೆ ಉಚಿತವಾಗಿ ಬಟ್ಟೆ ವಿತರಣೆ

06/11/2024, 21:40

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿಯ ಆರ್‌.ಎಸ್.ಪಿ. ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ರವಿ ಪೂಜಾರಿ ಅವರು ದೀಪಾವಳಿ ಶುಭ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನದ ಹತ್ತಿರದಲ್ಲಿನ ನಿರ್ಗತಿಕರು, ಬಡವರು ಹಾಗೂ ಕೆಇಬಿ ಕಾರ್ಮಿಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಿದರು.


ಬಟ್ಟೆಗಳನ್ನು ವಿತರಿಸಿ ಮಾತನಾಡಿದ ರವಿ ಪೂಜಾರಿ, ನಾನು ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಡವರ ಬಾಳಲ್ಲಿ ಖುಷಿ ಮೂಡಿಸಿ, ಅವರು ಸಂತೋಷದಿಂದ ಹಬ್ಬವನ್ನು ಆಚರಿಸಲು ಸಹಾಯ, ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ಅಥಣಿ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಸಂಚರಿಸಿ ನಿರ್ಗತಿಕರಿಗೆ, ಬಡವರಿಗೆ ಬಟ್ಟೆಗಳನ್ನು ವಿತರಿಸುತ್ತ ಬಂದಿದ್ದೇನೆ. ಬಡವರಿಗೆ ಅನ್ನದಾಸೋಹ, ದಾನ, ಧರ್ಮ ಮಾಡುವ ಮೂಲಕ ಜನ ಸೇವೆಯ ಕಾರ್ಯ ಮಾಡುತ್ತಿದ್ದೇನೆ. ಪ್ರತಿ ವರ್ಷದಂತೆ ಈ ವರ್ಷವೂ ಬಟ್ಟೆಗಳನ್ನು ವಿತರಿಸುತ್ತಿದ್ದೇನೆ. ಸಮಾಜಮುಖಿ ಕಾರ್ಯಗಳು, ಬಡ ಜನರ ಸೇವೆಯಲ್ಲಿ ಸಾರ್ಥಕತೆ ಕಾಣುವ ಉದ್ದೇಶದಿಂದ ಈಗಾಗಲೇ ನಾನು ಅಥಣಿ ಪಟ್ಟಣದಲ್ಲಿ ಪ್ರಾರಂಭಿಸಿರುವ ಸಂಚಾರಿ ವಾಹನದ ಮೂಲಕ ನಿತ್ಯ ಅನ್ನದಾಸೋಹ ಹಾಗೂ ಬಡವರಿಗೆ ಉಚಿತ ಆಂಬ್ಯುಲೆನ್ಸ್‌ ಸೇವೆಗೆ ಇತ್ತೀಚೆಗೆ ಒಂದು ವರ್ಷ ಪೂರ್ಣಗೊಂಡಿದೆ ಎಂದು ಇದೇ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.
ನಾನು ಬಡ ಕುಟುಂಬದಿಂದ ಬಂದವನಾಗಿದ್ದು ಬಡ ಜನರ ಬದುಕಿನ ಸಂಕಷ್ಟಗಳನ್ನು ಅರಿತಿದ್ದೇನೆ. ಆದ್ದರಿಂದ ನನ್ನ ಕೈಲಾದಷ್ಟು ಅಂಥವರಿಗೆ ಸಹಾಯ ಸಹಕಾರ ಮಾಡಬೇಕು ಎಂಬ ಮಹಾದಾಸೆಯಿಂದ ಹಾಗೂ ನನ್ನ ಆತ್ಮತೃಪ್ತಿಗಾಗಿ ಇಂತಹ ಸಮಾಜ ಸೇವಾ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ ಎಂದು ರವಿ ಪೂಜಾರಿ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರಶಾಂತ ತೋಡಕರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು