3:15 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ದೀಪಾವಳಿಗೆ ಬಡವರ ಬಾಳಲ್ಲಿ ಖುಷಿ ಮೂಡಿಸಿದ ರವಿ ಪೂಜಾರಿ: ನಿರ್ಗತಿಕರಿಗೆ ಉಚಿತವಾಗಿ ಬಟ್ಟೆ ವಿತರಣೆ

06/11/2024, 21:40

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿಯ ಆರ್‌.ಎಸ್.ಪಿ. ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ರವಿ ಪೂಜಾರಿ ಅವರು ದೀಪಾವಳಿ ಶುಭ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನದ ಹತ್ತಿರದಲ್ಲಿನ ನಿರ್ಗತಿಕರು, ಬಡವರು ಹಾಗೂ ಕೆಇಬಿ ಕಾರ್ಮಿಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಿದರು.


ಬಟ್ಟೆಗಳನ್ನು ವಿತರಿಸಿ ಮಾತನಾಡಿದ ರವಿ ಪೂಜಾರಿ, ನಾನು ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಡವರ ಬಾಳಲ್ಲಿ ಖುಷಿ ಮೂಡಿಸಿ, ಅವರು ಸಂತೋಷದಿಂದ ಹಬ್ಬವನ್ನು ಆಚರಿಸಲು ಸಹಾಯ, ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ಅಥಣಿ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಸಂಚರಿಸಿ ನಿರ್ಗತಿಕರಿಗೆ, ಬಡವರಿಗೆ ಬಟ್ಟೆಗಳನ್ನು ವಿತರಿಸುತ್ತ ಬಂದಿದ್ದೇನೆ. ಬಡವರಿಗೆ ಅನ್ನದಾಸೋಹ, ದಾನ, ಧರ್ಮ ಮಾಡುವ ಮೂಲಕ ಜನ ಸೇವೆಯ ಕಾರ್ಯ ಮಾಡುತ್ತಿದ್ದೇನೆ. ಪ್ರತಿ ವರ್ಷದಂತೆ ಈ ವರ್ಷವೂ ಬಟ್ಟೆಗಳನ್ನು ವಿತರಿಸುತ್ತಿದ್ದೇನೆ. ಸಮಾಜಮುಖಿ ಕಾರ್ಯಗಳು, ಬಡ ಜನರ ಸೇವೆಯಲ್ಲಿ ಸಾರ್ಥಕತೆ ಕಾಣುವ ಉದ್ದೇಶದಿಂದ ಈಗಾಗಲೇ ನಾನು ಅಥಣಿ ಪಟ್ಟಣದಲ್ಲಿ ಪ್ರಾರಂಭಿಸಿರುವ ಸಂಚಾರಿ ವಾಹನದ ಮೂಲಕ ನಿತ್ಯ ಅನ್ನದಾಸೋಹ ಹಾಗೂ ಬಡವರಿಗೆ ಉಚಿತ ಆಂಬ್ಯುಲೆನ್ಸ್‌ ಸೇವೆಗೆ ಇತ್ತೀಚೆಗೆ ಒಂದು ವರ್ಷ ಪೂರ್ಣಗೊಂಡಿದೆ ಎಂದು ಇದೇ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.
ನಾನು ಬಡ ಕುಟುಂಬದಿಂದ ಬಂದವನಾಗಿದ್ದು ಬಡ ಜನರ ಬದುಕಿನ ಸಂಕಷ್ಟಗಳನ್ನು ಅರಿತಿದ್ದೇನೆ. ಆದ್ದರಿಂದ ನನ್ನ ಕೈಲಾದಷ್ಟು ಅಂಥವರಿಗೆ ಸಹಾಯ ಸಹಕಾರ ಮಾಡಬೇಕು ಎಂಬ ಮಹಾದಾಸೆಯಿಂದ ಹಾಗೂ ನನ್ನ ಆತ್ಮತೃಪ್ತಿಗಾಗಿ ಇಂತಹ ಸಮಾಜ ಸೇವಾ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ ಎಂದು ರವಿ ಪೂಜಾರಿ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರಶಾಂತ ತೋಡಕರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು