4:00 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ದೀಪಾವಳಿಗೆ ಬಡವರ ಬಾಳಲ್ಲಿ ಖುಷಿ ಮೂಡಿಸಿದ ರವಿ ಪೂಜಾರಿ: ನಿರ್ಗತಿಕರಿಗೆ ಉಚಿತವಾಗಿ ಬಟ್ಟೆ ವಿತರಣೆ

06/11/2024, 21:40

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿಯ ಆರ್‌.ಎಸ್.ಪಿ. ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ರವಿ ಪೂಜಾರಿ ಅವರು ದೀಪಾವಳಿ ಶುಭ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನದ ಹತ್ತಿರದಲ್ಲಿನ ನಿರ್ಗತಿಕರು, ಬಡವರು ಹಾಗೂ ಕೆಇಬಿ ಕಾರ್ಮಿಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಿದರು.


ಬಟ್ಟೆಗಳನ್ನು ವಿತರಿಸಿ ಮಾತನಾಡಿದ ರವಿ ಪೂಜಾರಿ, ನಾನು ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಡವರ ಬಾಳಲ್ಲಿ ಖುಷಿ ಮೂಡಿಸಿ, ಅವರು ಸಂತೋಷದಿಂದ ಹಬ್ಬವನ್ನು ಆಚರಿಸಲು ಸಹಾಯ, ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ಅಥಣಿ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಸಂಚರಿಸಿ ನಿರ್ಗತಿಕರಿಗೆ, ಬಡವರಿಗೆ ಬಟ್ಟೆಗಳನ್ನು ವಿತರಿಸುತ್ತ ಬಂದಿದ್ದೇನೆ. ಬಡವರಿಗೆ ಅನ್ನದಾಸೋಹ, ದಾನ, ಧರ್ಮ ಮಾಡುವ ಮೂಲಕ ಜನ ಸೇವೆಯ ಕಾರ್ಯ ಮಾಡುತ್ತಿದ್ದೇನೆ. ಪ್ರತಿ ವರ್ಷದಂತೆ ಈ ವರ್ಷವೂ ಬಟ್ಟೆಗಳನ್ನು ವಿತರಿಸುತ್ತಿದ್ದೇನೆ. ಸಮಾಜಮುಖಿ ಕಾರ್ಯಗಳು, ಬಡ ಜನರ ಸೇವೆಯಲ್ಲಿ ಸಾರ್ಥಕತೆ ಕಾಣುವ ಉದ್ದೇಶದಿಂದ ಈಗಾಗಲೇ ನಾನು ಅಥಣಿ ಪಟ್ಟಣದಲ್ಲಿ ಪ್ರಾರಂಭಿಸಿರುವ ಸಂಚಾರಿ ವಾಹನದ ಮೂಲಕ ನಿತ್ಯ ಅನ್ನದಾಸೋಹ ಹಾಗೂ ಬಡವರಿಗೆ ಉಚಿತ ಆಂಬ್ಯುಲೆನ್ಸ್‌ ಸೇವೆಗೆ ಇತ್ತೀಚೆಗೆ ಒಂದು ವರ್ಷ ಪೂರ್ಣಗೊಂಡಿದೆ ಎಂದು ಇದೇ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.
ನಾನು ಬಡ ಕುಟುಂಬದಿಂದ ಬಂದವನಾಗಿದ್ದು ಬಡ ಜನರ ಬದುಕಿನ ಸಂಕಷ್ಟಗಳನ್ನು ಅರಿತಿದ್ದೇನೆ. ಆದ್ದರಿಂದ ನನ್ನ ಕೈಲಾದಷ್ಟು ಅಂಥವರಿಗೆ ಸಹಾಯ ಸಹಕಾರ ಮಾಡಬೇಕು ಎಂಬ ಮಹಾದಾಸೆಯಿಂದ ಹಾಗೂ ನನ್ನ ಆತ್ಮತೃಪ್ತಿಗಾಗಿ ಇಂತಹ ಸಮಾಜ ಸೇವಾ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ ಎಂದು ರವಿ ಪೂಜಾರಿ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರಶಾಂತ ತೋಡಕರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು