6:27 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ದೀಪಾವಳಿ ಉಡುಗೋರೆ: ವಿಕಲಚೇತನಿಗೆ ತ್ರಿಚಕ್ರ ವಾಹನ ಹಸ್ತಾಂತರಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ

27/10/2022, 21:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ದೀಪಾವಳಿ ಹಬ್ಬದ ಉಡುಗೊರೆಯಾಗಿ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಹಣಮಂತ ಕುರುಬರ ಎಂಬ ವಿಕಲಾಂಗ ಚೇತನ ಯುವಕನಿಗೆ ವೈಯುಕ್ತಿಕವಾಗಿ ಮಾಜಿ ಡಿಸಿಎಂ ‌ಹಾಲಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ತ್ರಿಚಕ್ರ ವಾಹನ ಹಸ್ತಾಂತರಿಸಿದರು.

ಇದೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಕಳೆದ ಎರಡು ತಿಂಗಳ ಹಿಂದೆ ಖಾಸಗಿ ಸುದ್ದಿವಾಹಿನಿ ಕಾರ್ಯಕ್ರಮ ಒಂದರಲ್ಲಿ ವಿಕಲ ಚೇತನ ಹಣಮಂತ ಕುರುಬರ ತನ್ನ ಅಳಲನ್ನ ತೋಡಿಕೊಂಡಿದ್ದನ್ನ ಮನಗಂಡು ಹಣಮಂತನಿಗೆ ತ್ರಿಚಕ್ರ ವಾಹನ ನೀಡುವ ಭರವಸೆ ನೀಡಿದ್ದೆ ಅದರಂತೆ ಇಂದು ದೀಪಾವಳಿ ಹಬ್ಬದ ಉಡುಗೊರೆಯಾಗಿ ಹಣಮಂತನಿಗೆ ತ್ರಿಚಕ್ರ ವಾಹನ ವಿತರಣೆ ಮಾಡಿದ್ದು ಸಂತಸದ ವಿಷಯ, ಇಂಥಹ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲಾ ಮುಂದಿನ ದಿನಗಳಲ್ಲಿ ನನ್ನ ಕ್ಷೇತ್ರದಲ್ಲಿ ಇರುವ ವಿಕಲ ಚೇತನರನ್ನ ಗುರುತಿಸಿ ಅವರಿಗೆ ತ್ರಿಚಕ್ರ ವಾಹನ ಕಲ್ಪಿಸುವ ಭರವಸೆ ನೀಡಿದರು.


ಯುವ ಮುಖಂಡ ಚಿದಾನಂದ ಸವದಿ, ಪುರಸಭೆ ಸದಸ್ಯರಾದ ರಾಜಶೇಖರ ಗೂಡೊಡಗಿ, ಕಲ್ಲೇಶ್ ಮಡ್ಡಿ, ನ್ಯಾಯವಾದಿ ನಿಂಗಪ್ಪಾ ಖೋಕಲೆ, ಮಾಹಾತೇಶ ಠಕ್ಕಣ್ಣವರ, ಆಸಿಫ್ ತಾಂಬೊಳಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು