12:08 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್ ಆಗ್ರಹ

15/09/2021, 21:27

ಮಂಗಳೂರು(reporterkarnataka.com):ರಾಜ್ಯದಲ್ಲಿ ದೇಗುಲಗಳನ್ನು ಕೆಡಹುವ ವಿಷಯ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಮಾಜಿ ಸಚಿವ ಯು.ಟಿ.ಖಾದರ್ ಎಂಟ್ರಿ ಕೊಟ್ಟಿದ್ದಾರೆ. ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನ ಕೆಡವಿದ್ದಾರೆ ಎಂದು ಖಾದರ್ ಟೀಕಿಸಿದ್ದಾರೆ.

ಮಾಧ್ಯಮ ಜತೆ ಈ ಕುರಿತು ಮಾತನಾಡಿದ ಅವರು, ಬಿಜೆಪಿ ಸರಕಾರ ಸಂಸ್ಕೃತಿ ಕೆಡವುತ್ತೆ ಎನ್ನುವುದು ಮತ್ತೆ ಸಾಬೀತಾಗಿದೆ. ದೇವಸ್ಥಾನ ಕೆಡವಿದ ಬಗ್ಗೆ ಸರ್ಕಾರ ಯಾರನ್ನು ಜವಾಬ್ದಾರಿ ಮಾಡುತ್ತೆ. ದೇವಸ್ಥಾನದ ಇತಿಹಾಸ, ಅಲ್ಲಿನ ಶಿಲ್ಪಕಲೆ ಎಲ್ಲವೂ ಇವರಿಗೆ ಅರ್ಥವಾಗಿಲ್ವಾ..? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಅಷ್ಟೇ ಅಲ್ಲ, ಇದು ಇಡೀ ದೇಶಕ್ಕೆ ದೊಡ್ಡ ಕಪ್ಪುಚುಕ್ಕೆ. ಇದರ ನೈತಿಕ ಹೊಣೆ ಹೊತ್ತು ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ. ಸರ್ಕಾರ ಆದೇಶ ಕೊಡುವಾಗ ಏಕೆ ಯೋಚನೆ ಮಾಡಿಲ್ಲ..? ಇದನ್ನು ಕೂತು ಚರ್ಚಿಸಿದ್ರೆ ಈ ಸಮಸ್ಯೆಗೆ ಪರಿಹಾರ ಸಿಗ್ತಾ ಇರ್ಲಿಲ್ವಾ..? ದೊಡ್ಡ ದೊಡ್ಡವರಿಗೆ ಬಿಜೆಪಿ ಸರ್ಕಾರ ಅಕ್ರಮ ಜಾಗ ಸಕ್ರಮ ಮಾಡಿ ಕೊಟ್ಟಿಲ್ವಾ..? ಹೀಗಿರುವಾಗ ದೇವಸ್ಥಾನದ ಜಾಗ ಸಕ್ರಮ ಮಾಡಲು ಸರ್ಕಾರಕ್ಕೆ ಏನು ತೊಂದರೆ…? ಇದು ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು