ಇತ್ತೀಚಿನ ಸುದ್ದಿ
ದೆಹಲಿ ಗಣರಾಜ್ಯೋತ್ಸವ ಫೆರೇಡ್ ಗೆ ದಂತ ವೈದ್ಯೆ ಪುತ್ತೂರಿನ ಡಾ. ವಜೀದಾಬಾನು ಆಯ್ಕೆ
29/12/2022, 10:19

ಪುತ್ತೂರು(reporterkarnataka.com);
ದೆಹಲಿಯಲ್ಲಿ ನಡೆಯಲಿರುವ 2023ನೇ ಸಾಲಿನ ಭಾರತ ಗಣರಾಜ್ಯೋತ್ಸವ ಫೆರೇಡ್ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾಬಾನು ಆಯ್ಕೆಯಾಗಿದ್ದಾರೆ.
ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಡಾ. ವಜೀದಾಬಾನು ಒಬ್ಬರಾಗಿದ್ದಾರೆ.
ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಯ ಪುತ್ರಿ. ಪ್ರಸ್ತುತ ಎ. ಜೆ. ದಂತ ವೈದ್ಯಕೀಯ ಕಾಲೇಜಿನಿಂದ ದಂತ ವೈದ್ಯಕೀಯ ಪದವಿ ಪಡೆದಿರುತ್ತಾರೆ.
ಇತ್ತೀಚೆಗೆ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಈ ಸಾಲಿನಲ್ಲಿ ಆರು ವಿಷಯಗಳಲ್ಲಿ ರ್ಯಾಂಕ್ ಪಡೆದಿರುತ್ತಾರೆ. ಪುತ್ತೂರು ಕಮ್ಯೂನಿಟಿ ಸೆಂಟರ್ನ ಕೌನ್ಸಿಲರ್ ಆಗಿರುವ ಅವರು ಹಲವಾರು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಪ್ರೇರಣೆ ನೀಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದ್ದಾರೆ ಎಂದು ಪುತ್ತೂರು ಕಮ್ಯೂನಿಟಿ ಸೆಂಟರ್ನ ಪ್ರಧಾನ ಕಾರ್ಯದರ್ಶಿ ಹನೀಫ್ ಪುತ್ತೂರು ತಿಳಿಸಿದ್ದಾರೆ.