7:53 PM Thursday14 - August 2025
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ…

ಇತ್ತೀಚಿನ ಸುದ್ದಿ

ದೆಹಲಿ ಹೋದವರಿಗೆ ಹೈಕಮಾಂಡ್ ತಕ್ಕ ಉತ್ತರ ಕೊಟ್ಟು ಕಳುಹಿಸಿದೆ: ನಾಯಕತ್ವ ಬದಲಾವಣೆ ಕುರಿತು ಬಿಎಸ್ ವೈ ಖಡಕ್ ಪ್ರತಿಕ್ರಿಯೆ

27/05/2021, 16:47

ಬೆಂಗಳೂರು(reporterkarnataka news): ಪ್ರಸ್ತುತ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ. ಕೊರೊನಾ ಎದುರಿಸಲು ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ. ಅದು ಬಿಟ್ಟು ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ. ದೆಹಲಿಗೆ ಹೋದವರಿಗೆ

ಹೈಕಮಾಂಡ್  ತಕ್ಕ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಸಭೆ ಕುರಿತು ನಿಮ್ಮ ಮುಂದೆ ಚರ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಖಾರವಾಗಿಯೇ ಉತ್ತರ ನೀಡಿದರು.

ಇಂದಿನ ಪರಿಸ್ಥಿತಿಯಲ್ಲಿ ಸಚಿವರು, ಶಾಸಕರು ಒಟ್ಟಾಗಿ ಕೋವಿಡ್ ಎದುರಿಸಬೇಕಿದೆ. ಕೊರೊನಾ ನಿಯಂತ್ರಿಸುವುದು, ಜನಹಿತ ಕಾಪಾಡುವುದು ನನ್ನ ಆದ್ಯತೆಯಾಗಿದೆ. ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದರು, ಅದೆಲ್ಲ ನನಗೆ ಅಗತ್ಯವಿಲ್ಲ.

ಹೈಕಮಾಂಡ್  ಅವರಿಗೆ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಪಕ್ಷದ ಸಭೆ ಕರೆಯುವ ವಿಚಾರ ನಿಮ್ಮೊಂದಿಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು