9:08 PM Thursday23 - October 2025
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್

ಇತ್ತೀಚಿನ ಸುದ್ದಿ

ದೆಹಲಿ ಹೋದವರಿಗೆ ಹೈಕಮಾಂಡ್ ತಕ್ಕ ಉತ್ತರ ಕೊಟ್ಟು ಕಳುಹಿಸಿದೆ: ನಾಯಕತ್ವ ಬದಲಾವಣೆ ಕುರಿತು ಬಿಎಸ್ ವೈ ಖಡಕ್ ಪ್ರತಿಕ್ರಿಯೆ

27/05/2021, 16:47

ಬೆಂಗಳೂರು(reporterkarnataka news): ಪ್ರಸ್ತುತ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ. ಕೊರೊನಾ ಎದುರಿಸಲು ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ. ಅದು ಬಿಟ್ಟು ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ. ದೆಹಲಿಗೆ ಹೋದವರಿಗೆ

ಹೈಕಮಾಂಡ್  ತಕ್ಕ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಸಭೆ ಕುರಿತು ನಿಮ್ಮ ಮುಂದೆ ಚರ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಖಾರವಾಗಿಯೇ ಉತ್ತರ ನೀಡಿದರು.

ಇಂದಿನ ಪರಿಸ್ಥಿತಿಯಲ್ಲಿ ಸಚಿವರು, ಶಾಸಕರು ಒಟ್ಟಾಗಿ ಕೋವಿಡ್ ಎದುರಿಸಬೇಕಿದೆ. ಕೊರೊನಾ ನಿಯಂತ್ರಿಸುವುದು, ಜನಹಿತ ಕಾಪಾಡುವುದು ನನ್ನ ಆದ್ಯತೆಯಾಗಿದೆ. ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದರು, ಅದೆಲ್ಲ ನನಗೆ ಅಗತ್ಯವಿಲ್ಲ.

ಹೈಕಮಾಂಡ್  ಅವರಿಗೆ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಪಕ್ಷದ ಸಭೆ ಕರೆಯುವ ವಿಚಾರ ನಿಮ್ಮೊಂದಿಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು