5:08 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ದೆಹಲಿ ಹೋದವರಿಗೆ ಹೈಕಮಾಂಡ್ ತಕ್ಕ ಉತ್ತರ ಕೊಟ್ಟು ಕಳುಹಿಸಿದೆ: ನಾಯಕತ್ವ ಬದಲಾವಣೆ ಕುರಿತು ಬಿಎಸ್ ವೈ ಖಡಕ್ ಪ್ರತಿಕ್ರಿಯೆ

27/05/2021, 16:47

ಬೆಂಗಳೂರು(reporterkarnataka news): ಪ್ರಸ್ತುತ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ. ಕೊರೊನಾ ಎದುರಿಸಲು ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ. ಅದು ಬಿಟ್ಟು ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ. ದೆಹಲಿಗೆ ಹೋದವರಿಗೆ

ಹೈಕಮಾಂಡ್  ತಕ್ಕ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಸಭೆ ಕುರಿತು ನಿಮ್ಮ ಮುಂದೆ ಚರ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಖಾರವಾಗಿಯೇ ಉತ್ತರ ನೀಡಿದರು.

ಇಂದಿನ ಪರಿಸ್ಥಿತಿಯಲ್ಲಿ ಸಚಿವರು, ಶಾಸಕರು ಒಟ್ಟಾಗಿ ಕೋವಿಡ್ ಎದುರಿಸಬೇಕಿದೆ. ಕೊರೊನಾ ನಿಯಂತ್ರಿಸುವುದು, ಜನಹಿತ ಕಾಪಾಡುವುದು ನನ್ನ ಆದ್ಯತೆಯಾಗಿದೆ. ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದರು, ಅದೆಲ್ಲ ನನಗೆ ಅಗತ್ಯವಿಲ್ಲ.

ಹೈಕಮಾಂಡ್  ಅವರಿಗೆ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಪಕ್ಷದ ಸಭೆ ಕರೆಯುವ ವಿಚಾರ ನಿಮ್ಮೊಂದಿಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು