2:43 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ದೆಹಲಿ ಹೋದವರಿಗೆ ಹೈಕಮಾಂಡ್ ತಕ್ಕ ಉತ್ತರ ಕೊಟ್ಟು ಕಳುಹಿಸಿದೆ: ನಾಯಕತ್ವ ಬದಲಾವಣೆ ಕುರಿತು ಬಿಎಸ್ ವೈ ಖಡಕ್ ಪ್ರತಿಕ್ರಿಯೆ

27/05/2021, 16:47

ಬೆಂಗಳೂರು(reporterkarnataka news): ಪ್ರಸ್ತುತ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ. ಕೊರೊನಾ ಎದುರಿಸಲು ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ. ಅದು ಬಿಟ್ಟು ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ. ದೆಹಲಿಗೆ ಹೋದವರಿಗೆ

ಹೈಕಮಾಂಡ್  ತಕ್ಕ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಸಭೆ ಕುರಿತು ನಿಮ್ಮ ಮುಂದೆ ಚರ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಖಾರವಾಗಿಯೇ ಉತ್ತರ ನೀಡಿದರು.

ಇಂದಿನ ಪರಿಸ್ಥಿತಿಯಲ್ಲಿ ಸಚಿವರು, ಶಾಸಕರು ಒಟ್ಟಾಗಿ ಕೋವಿಡ್ ಎದುರಿಸಬೇಕಿದೆ. ಕೊರೊನಾ ನಿಯಂತ್ರಿಸುವುದು, ಜನಹಿತ ಕಾಪಾಡುವುದು ನನ್ನ ಆದ್ಯತೆಯಾಗಿದೆ. ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದರು, ಅದೆಲ್ಲ ನನಗೆ ಅಗತ್ಯವಿಲ್ಲ.

ಹೈಕಮಾಂಡ್  ಅವರಿಗೆ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಪಕ್ಷದ ಸಭೆ ಕರೆಯುವ ವಿಚಾರ ನಿಮ್ಮೊಂದಿಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು