8:43 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ದೆಹಲಿ ವಿಧಾನಸಭೆ ಫಲಿತಾಂಶ ತುಷ್ಟೀಕರಣ ರಾಜಕೀಯದ ತಿರಸ್ಕಾರ: ಕೇಂದ್ರ ಸಚಿವ ಕುಮಾರಸ್ವಾಮಿ

09/02/2025, 09:40

ನವದೆಹಲಿ(reporterkarnataka.com): ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿದ್ದಾರೆ.
ಪ್ರಧಾನಿಗಳಾದ ಮೋದಿ ಅವರು, ಗೃಹ ಸಚಿವರಾದ ಅಮಿತ್ ಶಾ ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆಪಿ ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು