6:03 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದೆಹಲಿ ವಿಧಾನಸಭೆ ಫಲಿತಾಂಶ ತುಷ್ಟೀಕರಣ ರಾಜಕೀಯದ ತಿರಸ್ಕಾರ: ಕೇಂದ್ರ ಸಚಿವ ಕುಮಾರಸ್ವಾಮಿ

09/02/2025, 09:40

ನವದೆಹಲಿ(reporterkarnataka.com): ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿದ್ದಾರೆ.
ಪ್ರಧಾನಿಗಳಾದ ಮೋದಿ ಅವರು, ಗೃಹ ಸಚಿವರಾದ ಅಮಿತ್ ಶಾ ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆಪಿ ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು