2:06 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ದೆಹಲಿಯಲ್ಲಿ ಆಪರೇಷನ್ ಕಮಲ ವಿಫಲ;  62 ಶಾಸಕರ ಪೈಕಿ 53 ಮಂದಿ ಹಾಜರು: ಸೌರಭ್ ಭಾರದ್ವಾಜ್

26/08/2022, 10:54

ಹೊಸದಿಲ್ಲಿ(reporterkarnataka.com): ಆಮ್ ಆದ್ಮಿ ಪಕ್ಷದ ಕೆಲ ಶಾಸಕರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಯ ನಡುವೆ, ಪಕ್ಷದ ಮಹತ್ವದ ಸಭೆಯಲ್ಲಿ 62 ಶಾಸಕರ ಪೈಕಿ 53 ಶಾಸಕರು ಹಾಜರಿದ್ದಾರೆ. ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಈ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಿದೆ. 62 ಶಾಸಕರ ಪೈಕಿ 53 ಶಾಸಕರು ಇಂದು ಸಭೆಯಲ್ಲಿ ಹಾಜರಿದ್ದರು. ಸ್ಪೀಕರ್ ಹೊರ ದೇಶದಲ್ಲಿದ್ದು, ಮನೀಶ್ ಸಿಸೋಡಿಯಾ ಹಿಮಾಚಲದಲ್ಲಿದ್ದಾರೆ. ಸಿಎಂ ಇತರ ಶಾಸಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ವೇಳೆ  ಎಲ್ಲರೂ ತಮ್ಮ ಕೊನೆಯ ಉಸಿರು ಇರುವವರೆಗೂ ಸಿಎಂ ಕೇಜ್ರಿವಾಲ್ ಅವರೊಂದಿಗೆ ಇರುವುದಾಗಿ ಹೇಳಿದರು ಎಂದು ಸೌರಭ್ ಭಾರದ್ವಾಜ್ ಹೇಳಿದರು.

ಅಲ್ಲದೆ 40 ಶಾಸಕರಿಗೆ ತಲಾ ₹20 ಕೋಟಿಯಂತೆ ₹800 ಕೋಟಿ ಆಮಿಷ ಒಡ್ಡಲು ದುಡ್ಡು ಎಲ್ಲಿಂದ ಬಂದಿದೆ ಎಂಬುದನ್ನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತನಿಖೆ ನಡೆಸಬೇಕು ಎಂದು ಭಾರದ್ವಾಜ್ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು