12:02 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದೆಹಲಿಯಲ್ಲಿ ಆಪರೇಷನ್ ಕಮಲ ವಿಫಲ;  62 ಶಾಸಕರ ಪೈಕಿ 53 ಮಂದಿ ಹಾಜರು: ಸೌರಭ್ ಭಾರದ್ವಾಜ್

26/08/2022, 10:54

ಹೊಸದಿಲ್ಲಿ(reporterkarnataka.com): ಆಮ್ ಆದ್ಮಿ ಪಕ್ಷದ ಕೆಲ ಶಾಸಕರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಯ ನಡುವೆ, ಪಕ್ಷದ ಮಹತ್ವದ ಸಭೆಯಲ್ಲಿ 62 ಶಾಸಕರ ಪೈಕಿ 53 ಶಾಸಕರು ಹಾಜರಿದ್ದಾರೆ. ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಈ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಿದೆ. 62 ಶಾಸಕರ ಪೈಕಿ 53 ಶಾಸಕರು ಇಂದು ಸಭೆಯಲ್ಲಿ ಹಾಜರಿದ್ದರು. ಸ್ಪೀಕರ್ ಹೊರ ದೇಶದಲ್ಲಿದ್ದು, ಮನೀಶ್ ಸಿಸೋಡಿಯಾ ಹಿಮಾಚಲದಲ್ಲಿದ್ದಾರೆ. ಸಿಎಂ ಇತರ ಶಾಸಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ವೇಳೆ  ಎಲ್ಲರೂ ತಮ್ಮ ಕೊನೆಯ ಉಸಿರು ಇರುವವರೆಗೂ ಸಿಎಂ ಕೇಜ್ರಿವಾಲ್ ಅವರೊಂದಿಗೆ ಇರುವುದಾಗಿ ಹೇಳಿದರು ಎಂದು ಸೌರಭ್ ಭಾರದ್ವಾಜ್ ಹೇಳಿದರು.

ಅಲ್ಲದೆ 40 ಶಾಸಕರಿಗೆ ತಲಾ ₹20 ಕೋಟಿಯಂತೆ ₹800 ಕೋಟಿ ಆಮಿಷ ಒಡ್ಡಲು ದುಡ್ಡು ಎಲ್ಲಿಂದ ಬಂದಿದೆ ಎಂಬುದನ್ನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತನಿಖೆ ನಡೆಸಬೇಕು ಎಂದು ಭಾರದ್ವಾಜ್ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು