5:30 PM Monday30 - March 2026
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

ಇತ್ತೀಚಿನ ಸುದ್ದಿ

ದೆಹಲಿ ಯುವತಿಯ ಬರ್ಬರ ಹತ್ಯೆ: ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಖಂಡನೆ

20/11/2022, 10:41

ಮಂಗಳೂರು(reporterkarnataka.com): ದೆಹಲಿಯಲ್ಲಿ ಬೆಳಕಿಗೆ ಬಂದ ಶ್ರದ್ಧಾ ಎಂಬ ಯುವತಿಯನ್ನು ಅಫ್ತಾಬ್ ಎಂಬ ಯುವಕ ಬರ್ಬರ ರೀತಿಯಲ್ಲಿ ಹತ್ಯೆಗೈದ ಘಟನೆಯ ಬಗ್ಗೆ ಮಾಜಿ ಸಚಿವ, ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ತೀವ್ರ ಖಂಡಿಸಿದ್ದಾರೆ.

ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸಿ ಆರೋಪಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದ ಖಾದರ್ , ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಇತ್ತೀಚಿಗೆ ಸಮಾಜದಲ್ಲಿ ಯುವ ಜನಾಂಗ ಮಾದಕ ವ್ಯಸನಕ್ಕೆ ಒಳಗಾದ ಪರಿಣಾಮ ಇಂಥಹ ಘಟನೆಗಳು ಮರುಕಳಿಸುವುದಕ್ಕೆ ಸಾಕ್ಷಿ.ದುಷ್ಚಟಗಳಿಗೆ ಬಲಿಯಾಗಿ ಯುವ ಜನಾಂಗ ತಮ್ಮ ಜೀವನವನ್ನು ಹಾಳುಗೆಡುವುತ್ತಿದ್ದಾರೆ.ಈ ಬಗ್ಗೆ ಕೇಂದ್ರ ಸರಕಾರ ಎಚ್ಚೆತ್ತುಕೊಂಡು ಮಾದಕ ದ್ರವ್ಯಗಳನ್ನು ಪೂರೈಕೆ ಮಾಡುವವರ ಬಗ್ಗೆ ತೀವ್ರ ನಿಗಾ ವಹಿಸಿ ಹಾಗೂ ಯುವ ಸಮೂಹವನ್ನು ದುಷ್ಚಟದಿಂದ ದೂರ ಇಡಲು ಸೂಕ್ತ ಕಾನೂನನ್ನು ಜಾರಿಗೆ ತರಲಿ ಎಂದು ಖಾದರ್ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು