10:04 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ದಿಲ್ಲಿಯಲ್ಲಿ ಅಪಾಯದ ಮಟ್ಟಕ್ಕೇರಿದ ವಾಯು ಮಾಲಿನ್ಯ; ಹಲವರಲ್ಲಿ ಗಂಟಲು, ಕಣ್ಣು ತುರಿಕೆ

05/11/2021, 19:41

ಹೊಸದಿಲ್ಲಿ(reporterkarnataka.com): 

ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ಇಂದು ಬೆಳಗ್ಗೆ ಅಪಾಯಕಾರಿ ಹಂತಕ್ಕೆ ತಲುಪಿತ್ತು. ಜನಪಥ್‌ನಲ್ಲಿ ಇಂದು ಬೆಳಿಗ್ಗೆ ಮಾಲಿನ್ಯ ಮಾಪಕ 2.5 ಸಾಂದ್ರತೆಯು 655.07 ರಷ್ಟಿತ್ತು.

ದೆಹಲಿಯ ಆಕಾಶವನ್ನು ದಟ್ಟವಾದ ಹೊಗೆಯ ಹೊದಿಕೆಯು ಆವರಿಸಿದೆ , ಹಲವರು ಗಂಟಲಿನ ತುರಿಕೆ ಮತ್ತು ಕಣ್ಣಿನಲ್ಲಿ ನೀರು ತುಂಬಿಕೊಂಡಿದೆ ಎಂದು ದೂರಿದ್ದಾರೆ.

ದೆಹಲಿಯ ಮಂಜಿನ ಪರಿಸ್ಥಿತಿಗಳು ಶುಕ್ರವಾರ ಬೆಳಿಗ್ಗೆ ತೀವ್ರಗೊಂಡಿದ್ದು, ಸಫ್ದರ್‌ಜಂಗ್ ಮತ್ತು ಪಾಲಂ ವಿಮಾನ ನಿಲ್ದಾಣಗಳಲ್ಲಿ 200 ಮೀ ನಿಂದ 500 ಮೀ ವ್ಯಾಪ್ತಿಯವರೆಗೆ ಗೋಚರತೆ ಕುಸಿದಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ವಿಜ್ಞಾನಿಗಳು ತಿಳಿಸಿದ್ದಾರೆ.

ದೆಹಲಿ, ಪಂಜಾಬ್‌ ಸೇರಿದಂತೆ ಪಶ್ಚಿಮ ಬಂಗಾಳ  ರಾಜಸ್ತಾನ , ಚತ್ತೀಸಘಡ ಬಿಹಾರ ರಾಜ್ಯಗಳಲ್ಲಿ ಪಟಾಕಿ ನಿಷೇಧಿಸಿ ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶದಲ್ಲಿ ಬಹುತೇಕ ರಾಜ್ಯಗಳಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ. ಇತರೆ ಪಟಾಕಿಗೆ ಅವಕಾಶವಿಲ್ಲ. ಈ ನಿರ್ಧಾರ ಪರ ವಿರೋಧಕ್ಕೆ ಕಾರಣಾಗಿದೆ. ಹಿಂದೂಗಳ ಹಬ್ಬಕ್ಕೆ ಮಾತ್ರ ಪಟಾಕಿ ನಿಷೇಧ ಯಾಕೆ ಅನ್ನೋ ವಾದವೂ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು