3:18 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ದಿಲ್ಲಿಯಲ್ಲಿ ಅಪಾಯದ ಮಟ್ಟಕ್ಕೇರಿದ ವಾಯು ಮಾಲಿನ್ಯ; ಹಲವರಲ್ಲಿ ಗಂಟಲು, ಕಣ್ಣು ತುರಿಕೆ

05/11/2021, 19:41

ಹೊಸದಿಲ್ಲಿ(reporterkarnataka.com): 

ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ಇಂದು ಬೆಳಗ್ಗೆ ಅಪಾಯಕಾರಿ ಹಂತಕ್ಕೆ ತಲುಪಿತ್ತು. ಜನಪಥ್‌ನಲ್ಲಿ ಇಂದು ಬೆಳಿಗ್ಗೆ ಮಾಲಿನ್ಯ ಮಾಪಕ 2.5 ಸಾಂದ್ರತೆಯು 655.07 ರಷ್ಟಿತ್ತು.

ದೆಹಲಿಯ ಆಕಾಶವನ್ನು ದಟ್ಟವಾದ ಹೊಗೆಯ ಹೊದಿಕೆಯು ಆವರಿಸಿದೆ , ಹಲವರು ಗಂಟಲಿನ ತುರಿಕೆ ಮತ್ತು ಕಣ್ಣಿನಲ್ಲಿ ನೀರು ತುಂಬಿಕೊಂಡಿದೆ ಎಂದು ದೂರಿದ್ದಾರೆ.

ದೆಹಲಿಯ ಮಂಜಿನ ಪರಿಸ್ಥಿತಿಗಳು ಶುಕ್ರವಾರ ಬೆಳಿಗ್ಗೆ ತೀವ್ರಗೊಂಡಿದ್ದು, ಸಫ್ದರ್‌ಜಂಗ್ ಮತ್ತು ಪಾಲಂ ವಿಮಾನ ನಿಲ್ದಾಣಗಳಲ್ಲಿ 200 ಮೀ ನಿಂದ 500 ಮೀ ವ್ಯಾಪ್ತಿಯವರೆಗೆ ಗೋಚರತೆ ಕುಸಿದಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ವಿಜ್ಞಾನಿಗಳು ತಿಳಿಸಿದ್ದಾರೆ.

ದೆಹಲಿ, ಪಂಜಾಬ್‌ ಸೇರಿದಂತೆ ಪಶ್ಚಿಮ ಬಂಗಾಳ  ರಾಜಸ್ತಾನ , ಚತ್ತೀಸಘಡ ಬಿಹಾರ ರಾಜ್ಯಗಳಲ್ಲಿ ಪಟಾಕಿ ನಿಷೇಧಿಸಿ ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶದಲ್ಲಿ ಬಹುತೇಕ ರಾಜ್ಯಗಳಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ. ಇತರೆ ಪಟಾಕಿಗೆ ಅವಕಾಶವಿಲ್ಲ. ಈ ನಿರ್ಧಾರ ಪರ ವಿರೋಧಕ್ಕೆ ಕಾರಣಾಗಿದೆ. ಹಿಂದೂಗಳ ಹಬ್ಬಕ್ಕೆ ಮಾತ್ರ ಪಟಾಕಿ ನಿಷೇಧ ಯಾಕೆ ಅನ್ನೋ ವಾದವೂ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು