6:56 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ

19/08/2026, 18:55

ಉಡುಪಿ(reporterkarnataka.com): ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಂತೆ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠವನ್ನು ಕರಾವಳಿ ಭಾಗದಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಯು-ಆಯಕ್ಟ್ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ವತಿಯಿಂದ ಆಗಸ್ಟ್ 22ರಂದು ಉಡುಪಿಯಲ್ಲಿ ಸಭೆ ನಡೆಯಲಿದೆ ಎಂದು ಸಮಿತಿಯ ಸ್ಥಾಪಕ ಹಾಗೂ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದರು.

ಕರಾವಳಿಯಿಂದ ಬೆಂಗಳೂರಿನ ಹೈಕೋರ್ಟ್‌ಗೆ ಪ್ರಕರಣಗಳ ವಿಚಾರಣೆಗೆ ತೆರಳಲು 900ರಿಂದ 1,000 ಕಿ.ಮೀ.ಗೂ ಅಧಿಕ ದೂರ ಪ್ರಯಾಣಿಸಬೇಕಾಗಿದ್ದು, ಮಳೆಗಾಲದಲ್ಲಿ ಸಾರ್ವಜನಿಕರು, ಮಹಿಳೆಯರು ಹಾಗೂ ಕಕ್ಷಿದಾರರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಕರಾವಳಿಯಲ್ಲಿ ಪೀಠ ಸ್ಥಾಪನೆಯಾದರೆ ಕಡಿಮೆ ವೆಚ್ಚದಲ್ಲಿ ತ್ವರಿತ ನ್ಯಾಯ ದೊರೆಯಲಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ವಕೀಲರು, ಪತ್ರಕರ್ತರು, ಸಾಮಾಜಿಕ ಹಾಗೂ ಉದ್ಯಮ ಸಂಘಟನೆಗಳು, ವಿದ್ಯಾರ್ಥಿ ಮತ್ತು ಕಾರ್ಮಿಕ ಸಂಘಟನೆಗಳು, ಮಾಜಿ ಸೈನಿಕರು, ಆಟೋ ಚಾಲಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಹೋರಾಟವನ್ನು ವಕೀಲರಿಗೆ ಸೀಮಿತಗೊಳಿಸದೆ ಇಡೀ ಕರಾವಳಿ ಜನತೆಯ ಧ್ವನಿಯಾಗಿಸುವ ಉದ್ದೇಶವಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪೌರ್ಣಾಮಿ ಪ್ರೇಮ್, ವಿಜಯ್ ಡಿಸೋಜಾ,ಮಾಧವ ಕಾಮತ್,ಸರಿತಾ ಹಾಗೂ ಸುರೇಶ್ ಕಾಮತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು