ಇತ್ತೀಚಿನ ಸುದ್ದಿ
ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ | ಜೈಪುರದಲ್ಲಿ ಪ್ರತಿಭಟನೆ ವೇಳೆ CJP ಸಂಸ್ಥಾಪಕ ದೀಪ್ಕೆ ಮೇಲೆ ಹಲ್ಲೆ
15/06/2026, 22:06
ಜೈಪುರ(reporterkarnataka.com): ಸೋಷಿಯಲ್ ಮೀಡಿಯಾ ಇತ್ತೀಚೆಗೆ ಭಾರೀ ಸದ್ದು ಮಾಡಿದ್ದ ನೂತನ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಸಂಸ್ಥಾಪಕ ಅಭಜಿತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆದಿದೆ. ರಾಜಸ್ಥಾನದ ಜೈಪುರದಲ್ಲಿ ಸಾರ್ವಜನಿಕ ಸಂವಾದ ನಡೆಸುವಾಗ ಸೋಮವಾರ (ಜೂನ್ 15) ವೇಳೆ ಅವರನ್ನು ಥಳಿಸಿದ ಘಟನೆ ನಡೆದಿದೆ. ಶೈಕ್ಷಣಿಕ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಕೇಂದ್ರದ ವಿರುದ್ಧ ಧ್ವನಿ ಎತ್ತಿರುವ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ರಾಜಸ್ಥಾನದ ಜೈಪುರದಲ್ಲಿ ಸಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.



ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಧಿಕ್ಕಾರ ಕೂಗುತ್ತಿದ್ದರು. ಈ ವೇಳೆ ಸಾರ್ವಜನಿಕ ಸಂವಾದ ನಡೆಸುತ್ತಿದ್ದ ಅಭಿಜೀತ್ ದೀಪ್ಕೆ ಅವರನ್ನು ಹೆಗಲ ಮೇಲೆ ಹೊತ್ತು ಜನರ ಗುಂಪಿನ ನಡುವೆ ಕರೆದೊಯ್ಯಲಾಗುತ್ತಿತ್ತು. ದೀಪ್ಕೆ ಸಹ ಸಾರ್ವಜನಿಕರತ್ತ ಕೈ ಬೀಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಕೆಲವರು ಅಭಿಜಿತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಮುಖ, ಮೈ, ತಲೆಗೆ ಹೊಡೆಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.












