7:20 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

25/08/2026, 19:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನದ ಹಬ್ಬ ಹಾಗೂ ಹೊಸಕ್ಕಿ ಹಬ್ಬವನ್ನು ಕ್ರೈಸ್ತರೂ ಪೂರ್ವ ಕಾಲದಿಂದಲೂ ಆಚರಿಸುತ್ತಿದ್ದು ಈ ಹಬ್ಬಕ್ಕೆ ಒಂದು ದಿನದ ಸ್ಥಳೀಯ ರಜೆಯನ್ನು ಸರ್ಕಾರ ಘೋಷಣೆ ಮಾಡಬೇಕು ಎಂದು ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ದಿ ನಿಗಮದ ನಿರ್ದೇಶಕ ಹರ್ಷ ಮೆಲ್ವಿನ್ ಲಸ್ರಾದೊ ಒತ್ತಾಯಿಸಿದ್ದಾರೆ.
ಅವರು ಪತ್ರಿಕೆ ಹೇಳಿಕೆಯಲ್ಲಿ ಹಿಂದಿನಿಂದಲೂ ಕ್ರೈಸ್ತರು ರಾಜ್ಯದಾದ್ಯಂತ ಮಾತೆ ಮರಿಯಮ್ಮನವರ ಹಬ್ಬವನ್ನು ಭಕ್ತಿ ಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸುತ್ತಾರೆ. ಆದರೊಂದಿಗೆ ಕ್ರೈಸ್ತರ ಸಂಸ್ಕೃತಿ ಮೆರೆಯುವ ಹೊಸಕ್ಕಿ ಹಬ್ಬವನ್ನಾಗಿಯೂ ಆಚರಿಸಲಾಗುತ್ತದೆ. ಹಬ್ಬದ ಪ್ರಯುಕ್ತ ಒಂಬತ್ತು ದಿನಗಳ ಕಾಲ ಬಾಲಿಕಾ ಮರಿಯಮ್ಮನವರ ಪ್ರತಿಮೆಗೆ ಹೂ ಅರ್ಪಿಸಿ ನೋವೇನಾ ಪ್ರಾರ್ಥನೆಯನ್ನು ನೆರವೇರಿಸಲಾಗುತ್ತದೆ. ಈ ಹಬ್ಬಕ್ಕೆ ಯಾವುದೇ ಸರ್ಕಾರಿ ರಜೆಯಾಗಲೀ ಅಥವಾ ಸ್ಥಳೀಯ ರಜೆಯಾಗಲಿ ಇಲ್ಲ. ರಾಜ್ಯದಾದ್ಯಂತ ಹಾಗೂ ವಿಶೇಷವಾಗಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕ್ರೈಸ್ತ ಸಮುದಾಯದವರು ಹೆಚ್ಚಾಗಿ ನೆಲೆಸಿರುವ ಜಿಲ್ಲೆಗಳಾಗಿದ್ದು ಕ್ರೈಸ್ತರ ಭಾವನೆಗಳಿಗೆ ಬೆಲೆ ನೀಡಿ ಸೆಪ್ಟೆಂಬರ್ 8 ರಂದು ರಾಜ್ಯದಾದ್ಯಂತ ಒಂದು ದಿನದ ಸ್ಥಳೀಯ ಅಥವಾ ಸಾರ್ವತ್ರಿಕ ರಜೆಯನ್ನು ಸರ್ಕಾರವು ಘೋಷಣೆ ಮಾಡಿ ಮಾತೆ ಮರಿಯಮ್ಮನವರ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಅನುವು ಮಾಡಿ ಕೊಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು