3:29 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಮಂಗಳೂರಿನ‌ ರಾಜಕಾಲುವೆ, ಚರಂಡಿಗಳ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ

19/02/2026, 20:43

ಮಂಗಳೂರು(reporterkarnata.com): ಮುಂಬರುವ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಕೃತಕ ನೆರೆಯಿಂದ ಹಲವಾರು ಪ್ರದೇಶಗಳು ಜಲಾವೃತವಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದನ್ನು ಗಮನಿಸಲಾಗಿದ್ದು, ಈ ನಿಟ್ಟಿನಲ್ಲಿ ಮುಂಗಾರು ಮಳೆಯಲ್ಲಿ ಉಂಟಾಗಬಹುದಾದ ಕೃತಕ ನೆರೆಯನ್ನು ತಡೆಗಟ್ಟುವ ಉದ್ದೇಶದಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಹಾನಗರಪಾಲಿಕೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಗುರುವಾರ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮುಂಜಾಗ್ರತಾ ಕ್ರಮವಾಗಿ ನಗರದ ರಾಜಕಾಲುವೆ / ಬೃಹತ್ ಚರಂಡಿಗಳ ಹೂಳೆತ್ತುವ ಕಾಮಗಾರಿಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ಶೀಘ್ರವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಮಂಗಳೂರು ಮಹಾನಗರಪಾಲಿಕೆಯ ಮಳೆಗಾಲದ ಪೂರ್ವ ಸಿದ್ಧತೆ ಭಾಗವಾಗಿ ಮಹಾನಗರಪಾಲಿಕೆಯ ಎಲ್ಲಾ ವಾರ್ಡ್‍ಗಳಲ್ಲಿ ಬೃಹತ್ ರಾಜಕಾಲುವೆ ಸುಮಾರು 50 ಕಿಲೋ ಮೀಟರ್ ಮತ್ತು ರಾಜಕಾಲುವೆಗೆ ಕೂಡುವ ಮುಖ್ಯ ಚರಂಡಿಯನ್ನು ಒಳಗೊಂಡು ಹೂಳೆತ್ತುವ ಕಾಮಗಾರಿಯನ್ನು ಮಾರ್ಚ್ ತಿಂಗಳಿಂದ ಪ್ರಾರಂಭಿಸಲು ಉದ್ದೇಶಿಸಿದ್ದು ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ತಿಳಿಸಿದರು.
ಕಾಮಗಾರಿಯನ್ನು ಉತ್ತಮ ಹಾಗೂ ವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುವ ಬಗ್ಗೆ ಸಾರ್ವಜನಿಕರು/ಸಂಘ ಸಂಸ್ಥೆಗಳು ಸಲಹೆಗಳನ್ನು ನೀಡಬಹುದಾಗಿದ್ದು, ಹೂಳೆತ್ತುವ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಸ್ವಾಗತಿಸುತ್ತದೆ.ಪಾಲಿಕೆಯ ಸಹಾಯವಾಣಿ ಸಂಖ್ಯೆ -0824-2220306/ 2220319 ಗೆ ಅಥವಾ ವಾಟ್ಸ್‍ಆ್ಯಪ್ ಸಂಖ್ಯೆ 9449007722 ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು