3:34 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉಸ್ತುವಾರಿ ಸಚಿವರ ವಿರುದ್ದ ಅವಹೇಳನಕಾರಿ ಪೋಸ್ಟ್: ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ಮೇಲೆ ಎಫ್ ಐಆರ್

18/05/2025, 22:38

ಮಂಗಳೂರು(reporterkarnataka.com): ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಶ್ವೇತಾ ಪೂಜಾರಿ ತನ್ನ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು.
ಸುಹಾಸ್ ಶೆಟ್ಟಿ ಕೊಲೆ ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಬುರ್ಖಾಧಾರಿ ಮಹಿಳೆಯರನ್ನು ನಮಗೆ ತಂದೊಪ್ಪಿಸಿ, ಅವರನ್ನು ಯುವ ಮೋರ್ಚಾದ ಮಹಿಳೆಯರು ನೋಡಿಕೊಳ್ಳುತ್ತೇವೆಂದು ಪ್ರಚೋದನಕಾರಿ ಪೋಸ್ಟ್ ಮಾಡಿದ್ದರು. ಇದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೋಟೋ ತೋರಿಸಿ ಗೂಂಡಾ ಮುಂತಾದ ಅವಾಚ್ಯ ಪದಗಳಿಂದ ನಿಂದಿಸಿ ಪೋಸ್ಟ್ ಮಾಡಿದ್ದು ಈ ಬಗ್ಗೆ ಸುರತ್ಕಲ್ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶಾಂತಾ ರಾವ್ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ಇದರಂತೆ, ಸುರತ್ಕಲ್ ಠಾಣೆಯಲ್ಲಿ ಶ್ವೇತಾ ಪೂಜಾರಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣವನ್ನು ಸಿಇಎನ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು