10:46 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಉಸ್ತುವಾರಿ ಸಚಿವರ ವಿರುದ್ದ ಅವಹೇಳನಕಾರಿ ಪೋಸ್ಟ್: ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ಮೇಲೆ ಎಫ್ ಐಆರ್

18/05/2025, 22:38

ಮಂಗಳೂರು(reporterkarnataka.com): ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಶ್ವೇತಾ ಪೂಜಾರಿ ತನ್ನ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು.
ಸುಹಾಸ್ ಶೆಟ್ಟಿ ಕೊಲೆ ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಬುರ್ಖಾಧಾರಿ ಮಹಿಳೆಯರನ್ನು ನಮಗೆ ತಂದೊಪ್ಪಿಸಿ, ಅವರನ್ನು ಯುವ ಮೋರ್ಚಾದ ಮಹಿಳೆಯರು ನೋಡಿಕೊಳ್ಳುತ್ತೇವೆಂದು ಪ್ರಚೋದನಕಾರಿ ಪೋಸ್ಟ್ ಮಾಡಿದ್ದರು. ಇದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೋಟೋ ತೋರಿಸಿ ಗೂಂಡಾ ಮುಂತಾದ ಅವಾಚ್ಯ ಪದಗಳಿಂದ ನಿಂದಿಸಿ ಪೋಸ್ಟ್ ಮಾಡಿದ್ದು ಈ ಬಗ್ಗೆ ಸುರತ್ಕಲ್ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶಾಂತಾ ರಾವ್ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ಇದರಂತೆ, ಸುರತ್ಕಲ್ ಠಾಣೆಯಲ್ಲಿ ಶ್ವೇತಾ ಪೂಜಾರಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣವನ್ನು ಸಿಇಎನ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು