4:45 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ದೇಶದಲ್ಲಿ ಈ ವರ್ಷ ಅಂತ್ಯದ ವೇಳೆಗೆ 5G ಸೇವೆ ಆರಂಭ: ರಾಜ್ಯಸಭೆಯಲ್ಲಿ ಕೇಂದ್ರ ಸರಕಾರ ಮಾಹಿತಿ

25/03/2022, 23:45

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಈ ವರ್ಷದ ಅಂತ್ಯದ ವೇಳೆ 5G ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಶುಕ್ರವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದೇವು ಸಿನ್ಹ ಚೌಹಾಣ್, 5G ಸೇವೆಗಾಗಿ ಸ್ಪೆಕ್ಟ್ರಮ್ ಹರಾಜು ಕೂಡ ಶೀಘ್ರದಲ್ಲೇ ನಡೆಯಲಿದೆ. ದೇಶದಲ್ಲಿ 5ಜಿ ತಂತ್ರಜ್ಞಾನ ಪ್ರಾರಂಭಕ್ಕಾಗಿ ನಾಲ್ಕು ಕಂಪನಿಗಳಿಗೆ ತರಂಗಾಂತರಗಳನ್ನು ರೂಪಿಸಲು ಅನುಮತಿ ನೀಡಲಾಗಿದೆ. ಶೀಘ್ರದಲ್ಲೇ ಪ್ರಯೋಗಗಳು ಪೂರ್ಣಗೊಂಡು, ದೇಶಾದ್ಯಂತ 5ಜಿ ಸೇವೆ ಜನರಿಗೆ ಸಿಗಲಿದೆ ಎಂದು ತಿಳಿಸಿದರು.

ಇನ್ನು ಬಿಎಸ್​ಎನ್​ಎಲ್​ ಕೂಡ ಈ ವರ್ಷ 4 ಜಿ ಸೇವೆಯನ್ನು ಆರಂಭಿಸಲಿದೆ. ಕಳೆದ 7 ವರ್ಷಗಳಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ಮಹಾನ್​ ಕ್ರಾಂತಿಯಾಗಿದೆ. ಅಂತರ್ಜಾಲ ಬಳಕೆಯ ಮೇಲೆ ಸುಂಕಗಳು ಕಡಿಮೆ ಇದ್ದ ಕಾರಣ ಡೇಟಾ ಬಳಕೆಯು ಹೆಚ್ಚಿದೆ ಎಂದು ಅವರು ನೀಡಿದರು.

ದೇಶದಲ್ಲಿ ಮೊಬೈಲ್ ಬಳಕೆದಾರರ ಪ್ರಮಾಣ ಅಧಿಕವಾಗುತ್ತಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಮೊಬೈಲ್ ಚಂದಾದಾರರ ಸಂಖ್ಯೆ 2020 ರಲ್ಲಿದ್ದ 1157.75 ಮಿಲಿಯನ್‌ನಿಂದ 2021 ರ ವೇಳೆಗೆ ಅದು 1180.96 ಮಿಲಿಯನ್‌ಗೆ ಏರಿದೆ ಎಂದು ಮಾಹಿತಿ ನೀಡಿದರು,.

ಇತ್ತೀಚಿನ ಸುದ್ದಿ

ಜಾಹೀರಾತು