4:18 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ದೇಶದಲ್ಲಿ ಈ ವರ್ಷ ಅಂತ್ಯದ ವೇಳೆಗೆ 5G ಸೇವೆ ಆರಂಭ: ರಾಜ್ಯಸಭೆಯಲ್ಲಿ ಕೇಂದ್ರ ಸರಕಾರ ಮಾಹಿತಿ

25/03/2022, 23:45

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಈ ವರ್ಷದ ಅಂತ್ಯದ ವೇಳೆ 5G ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಶುಕ್ರವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದೇವು ಸಿನ್ಹ ಚೌಹಾಣ್, 5G ಸೇವೆಗಾಗಿ ಸ್ಪೆಕ್ಟ್ರಮ್ ಹರಾಜು ಕೂಡ ಶೀಘ್ರದಲ್ಲೇ ನಡೆಯಲಿದೆ. ದೇಶದಲ್ಲಿ 5ಜಿ ತಂತ್ರಜ್ಞಾನ ಪ್ರಾರಂಭಕ್ಕಾಗಿ ನಾಲ್ಕು ಕಂಪನಿಗಳಿಗೆ ತರಂಗಾಂತರಗಳನ್ನು ರೂಪಿಸಲು ಅನುಮತಿ ನೀಡಲಾಗಿದೆ. ಶೀಘ್ರದಲ್ಲೇ ಪ್ರಯೋಗಗಳು ಪೂರ್ಣಗೊಂಡು, ದೇಶಾದ್ಯಂತ 5ಜಿ ಸೇವೆ ಜನರಿಗೆ ಸಿಗಲಿದೆ ಎಂದು ತಿಳಿಸಿದರು.

ಇನ್ನು ಬಿಎಸ್​ಎನ್​ಎಲ್​ ಕೂಡ ಈ ವರ್ಷ 4 ಜಿ ಸೇವೆಯನ್ನು ಆರಂಭಿಸಲಿದೆ. ಕಳೆದ 7 ವರ್ಷಗಳಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ಮಹಾನ್​ ಕ್ರಾಂತಿಯಾಗಿದೆ. ಅಂತರ್ಜಾಲ ಬಳಕೆಯ ಮೇಲೆ ಸುಂಕಗಳು ಕಡಿಮೆ ಇದ್ದ ಕಾರಣ ಡೇಟಾ ಬಳಕೆಯು ಹೆಚ್ಚಿದೆ ಎಂದು ಅವರು ನೀಡಿದರು.

ದೇಶದಲ್ಲಿ ಮೊಬೈಲ್ ಬಳಕೆದಾರರ ಪ್ರಮಾಣ ಅಧಿಕವಾಗುತ್ತಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಮೊಬೈಲ್ ಚಂದಾದಾರರ ಸಂಖ್ಯೆ 2020 ರಲ್ಲಿದ್ದ 1157.75 ಮಿಲಿಯನ್‌ನಿಂದ 2021 ರ ವೇಳೆಗೆ ಅದು 1180.96 ಮಿಲಿಯನ್‌ಗೆ ಏರಿದೆ ಎಂದು ಮಾಹಿತಿ ನೀಡಿದರು,.

ಇತ್ತೀಚಿನ ಸುದ್ದಿ

ಜಾಹೀರಾತು