9:25 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ದೇಶದಲ್ಲಿ ಈ ವರ್ಷ ಅಂತ್ಯದ ವೇಳೆಗೆ 5G ಸೇವೆ ಆರಂಭ: ರಾಜ್ಯಸಭೆಯಲ್ಲಿ ಕೇಂದ್ರ ಸರಕಾರ ಮಾಹಿತಿ

25/03/2022, 23:45

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಈ ವರ್ಷದ ಅಂತ್ಯದ ವೇಳೆ 5G ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಶುಕ್ರವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದೇವು ಸಿನ್ಹ ಚೌಹಾಣ್, 5G ಸೇವೆಗಾಗಿ ಸ್ಪೆಕ್ಟ್ರಮ್ ಹರಾಜು ಕೂಡ ಶೀಘ್ರದಲ್ಲೇ ನಡೆಯಲಿದೆ. ದೇಶದಲ್ಲಿ 5ಜಿ ತಂತ್ರಜ್ಞಾನ ಪ್ರಾರಂಭಕ್ಕಾಗಿ ನಾಲ್ಕು ಕಂಪನಿಗಳಿಗೆ ತರಂಗಾಂತರಗಳನ್ನು ರೂಪಿಸಲು ಅನುಮತಿ ನೀಡಲಾಗಿದೆ. ಶೀಘ್ರದಲ್ಲೇ ಪ್ರಯೋಗಗಳು ಪೂರ್ಣಗೊಂಡು, ದೇಶಾದ್ಯಂತ 5ಜಿ ಸೇವೆ ಜನರಿಗೆ ಸಿಗಲಿದೆ ಎಂದು ತಿಳಿಸಿದರು.

ಇನ್ನು ಬಿಎಸ್​ಎನ್​ಎಲ್​ ಕೂಡ ಈ ವರ್ಷ 4 ಜಿ ಸೇವೆಯನ್ನು ಆರಂಭಿಸಲಿದೆ. ಕಳೆದ 7 ವರ್ಷಗಳಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ಮಹಾನ್​ ಕ್ರಾಂತಿಯಾಗಿದೆ. ಅಂತರ್ಜಾಲ ಬಳಕೆಯ ಮೇಲೆ ಸುಂಕಗಳು ಕಡಿಮೆ ಇದ್ದ ಕಾರಣ ಡೇಟಾ ಬಳಕೆಯು ಹೆಚ್ಚಿದೆ ಎಂದು ಅವರು ನೀಡಿದರು.

ದೇಶದಲ್ಲಿ ಮೊಬೈಲ್ ಬಳಕೆದಾರರ ಪ್ರಮಾಣ ಅಧಿಕವಾಗುತ್ತಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಮೊಬೈಲ್ ಚಂದಾದಾರರ ಸಂಖ್ಯೆ 2020 ರಲ್ಲಿದ್ದ 1157.75 ಮಿಲಿಯನ್‌ನಿಂದ 2021 ರ ವೇಳೆಗೆ ಅದು 1180.96 ಮಿಲಿಯನ್‌ಗೆ ಏರಿದೆ ಎಂದು ಮಾಹಿತಿ ನೀಡಿದರು,.

ಇತ್ತೀಚಿನ ಸುದ್ದಿ

ಜಾಹೀರಾತು