2:06 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ದೇಶದಲ್ಲಿ ಈ ವರ್ಷ ಅಂತ್ಯದ ವೇಳೆಗೆ 5G ಸೇವೆ ಆರಂಭ: ರಾಜ್ಯಸಭೆಯಲ್ಲಿ ಕೇಂದ್ರ ಸರಕಾರ ಮಾಹಿತಿ

25/03/2022, 23:45

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಈ ವರ್ಷದ ಅಂತ್ಯದ ವೇಳೆ 5G ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಶುಕ್ರವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದೇವು ಸಿನ್ಹ ಚೌಹಾಣ್, 5G ಸೇವೆಗಾಗಿ ಸ್ಪೆಕ್ಟ್ರಮ್ ಹರಾಜು ಕೂಡ ಶೀಘ್ರದಲ್ಲೇ ನಡೆಯಲಿದೆ. ದೇಶದಲ್ಲಿ 5ಜಿ ತಂತ್ರಜ್ಞಾನ ಪ್ರಾರಂಭಕ್ಕಾಗಿ ನಾಲ್ಕು ಕಂಪನಿಗಳಿಗೆ ತರಂಗಾಂತರಗಳನ್ನು ರೂಪಿಸಲು ಅನುಮತಿ ನೀಡಲಾಗಿದೆ. ಶೀಘ್ರದಲ್ಲೇ ಪ್ರಯೋಗಗಳು ಪೂರ್ಣಗೊಂಡು, ದೇಶಾದ್ಯಂತ 5ಜಿ ಸೇವೆ ಜನರಿಗೆ ಸಿಗಲಿದೆ ಎಂದು ತಿಳಿಸಿದರು.

ಇನ್ನು ಬಿಎಸ್​ಎನ್​ಎಲ್​ ಕೂಡ ಈ ವರ್ಷ 4 ಜಿ ಸೇವೆಯನ್ನು ಆರಂಭಿಸಲಿದೆ. ಕಳೆದ 7 ವರ್ಷಗಳಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ಮಹಾನ್​ ಕ್ರಾಂತಿಯಾಗಿದೆ. ಅಂತರ್ಜಾಲ ಬಳಕೆಯ ಮೇಲೆ ಸುಂಕಗಳು ಕಡಿಮೆ ಇದ್ದ ಕಾರಣ ಡೇಟಾ ಬಳಕೆಯು ಹೆಚ್ಚಿದೆ ಎಂದು ಅವರು ನೀಡಿದರು.

ದೇಶದಲ್ಲಿ ಮೊಬೈಲ್ ಬಳಕೆದಾರರ ಪ್ರಮಾಣ ಅಧಿಕವಾಗುತ್ತಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಮೊಬೈಲ್ ಚಂದಾದಾರರ ಸಂಖ್ಯೆ 2020 ರಲ್ಲಿದ್ದ 1157.75 ಮಿಲಿಯನ್‌ನಿಂದ 2021 ರ ವೇಳೆಗೆ ಅದು 1180.96 ಮಿಲಿಯನ್‌ಗೆ ಏರಿದೆ ಎಂದು ಮಾಹಿತಿ ನೀಡಿದರು,.

ಇತ್ತೀಚಿನ ಸುದ್ದಿ

ಜಾಹೀರಾತು