9:53 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದೇಶದಲ್ಲಿ ಈ ವರ್ಷ ಅಂತ್ಯದ ವೇಳೆಗೆ 5G ಸೇವೆ ಆರಂಭ: ರಾಜ್ಯಸಭೆಯಲ್ಲಿ ಕೇಂದ್ರ ಸರಕಾರ ಮಾಹಿತಿ

25/03/2022, 23:45

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಈ ವರ್ಷದ ಅಂತ್ಯದ ವೇಳೆ 5G ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಶುಕ್ರವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದೇವು ಸಿನ್ಹ ಚೌಹಾಣ್, 5G ಸೇವೆಗಾಗಿ ಸ್ಪೆಕ್ಟ್ರಮ್ ಹರಾಜು ಕೂಡ ಶೀಘ್ರದಲ್ಲೇ ನಡೆಯಲಿದೆ. ದೇಶದಲ್ಲಿ 5ಜಿ ತಂತ್ರಜ್ಞಾನ ಪ್ರಾರಂಭಕ್ಕಾಗಿ ನಾಲ್ಕು ಕಂಪನಿಗಳಿಗೆ ತರಂಗಾಂತರಗಳನ್ನು ರೂಪಿಸಲು ಅನುಮತಿ ನೀಡಲಾಗಿದೆ. ಶೀಘ್ರದಲ್ಲೇ ಪ್ರಯೋಗಗಳು ಪೂರ್ಣಗೊಂಡು, ದೇಶಾದ್ಯಂತ 5ಜಿ ಸೇವೆ ಜನರಿಗೆ ಸಿಗಲಿದೆ ಎಂದು ತಿಳಿಸಿದರು.

ಇನ್ನು ಬಿಎಸ್​ಎನ್​ಎಲ್​ ಕೂಡ ಈ ವರ್ಷ 4 ಜಿ ಸೇವೆಯನ್ನು ಆರಂಭಿಸಲಿದೆ. ಕಳೆದ 7 ವರ್ಷಗಳಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ಮಹಾನ್​ ಕ್ರಾಂತಿಯಾಗಿದೆ. ಅಂತರ್ಜಾಲ ಬಳಕೆಯ ಮೇಲೆ ಸುಂಕಗಳು ಕಡಿಮೆ ಇದ್ದ ಕಾರಣ ಡೇಟಾ ಬಳಕೆಯು ಹೆಚ್ಚಿದೆ ಎಂದು ಅವರು ನೀಡಿದರು.

ದೇಶದಲ್ಲಿ ಮೊಬೈಲ್ ಬಳಕೆದಾರರ ಪ್ರಮಾಣ ಅಧಿಕವಾಗುತ್ತಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಮೊಬೈಲ್ ಚಂದಾದಾರರ ಸಂಖ್ಯೆ 2020 ರಲ್ಲಿದ್ದ 1157.75 ಮಿಲಿಯನ್‌ನಿಂದ 2021 ರ ವೇಳೆಗೆ ಅದು 1180.96 ಮಿಲಿಯನ್‌ಗೆ ಏರಿದೆ ಎಂದು ಮಾಹಿತಿ ನೀಡಿದರು,.

ಇತ್ತೀಚಿನ ಸುದ್ದಿ

ಜಾಹೀರಾತು