3:44 PM Monday25 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ದೇಶದ ನಾನಾ ಕಡೆಗಳಲ್ಲಿ ಕಂಪಿಸಿದ ಭೂಮಿ: ತಿರುಪತಿಯಲ್ಲಿ 3.6, ಲಡಾಖ್​​ನಲ್ಲಿ 4.3ರಷ್ಟು ತೀವ್ರತೆ ದಾಖಲು

03/04/2022, 18:18

ಹೊಸದಿಲ್ಲಿ(reporterkarnataka.com); ದೇಶದ ವಿವಿಧೆಡೆಗಳಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆ ವರೆಗೆ ಭೂಕಂಪಗಳು ಸಂಭವಿಸಿವೆ. 

ಆಂಧ್ರಪ್ರದೇಶದ ತಿರುಪತಿಯಲ್ಲಿ ಭಾನುವಾರ ಬೆಳಗಿನ ಜಾವ 1.10 ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ತಿರುಪತಿಯಿಂದ ಈಶಾನ್ಯಕ್ಕೆ 85 ಕಿಮೀ ದೂರದಲ್ಲಿ ಭೂಗರ್ಭದ 20 ಕಿಮೀ ಆಳದಲ್ಲಿ ಕಂಪನದ ಕೇಂದ್ರವಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದಿಂದ ಯಾವುದೇ ಹಾನಿಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಲಡಾಖ್​​, ಅಂಡಮಾನ್ ನಲ್ಲೂ ಭೂಕಂಪನ:

ಜಮ್ಮು-ಕಾಶ್ಮೀರದ ಲಡಾಖ್​​ನಲ್ಲಿರುವ ಅಲ್ಚಿ ಪ್ರದೇಶದ ಉತ್ತರದಲ್ಲಿ ಇಂದು ಬೆಳಗ್ಗೆ7.29ರ ಭೂಮಿ ಕಂಪಿಸಿದೆ. ಭೂಕಂಪದ ತೀವ್ರತೆ ರಿಕ್ಟರ್​ ಮಾಪಕದಲ್ಲಿ 4.3ರಷ್ಟು ದಾಖಲಾಗಿದೆ. ಶನಿವಾರ ರಾತ್ರಿ 2.5೦ರ ಸುಮಾರಿಗೆ ಅಂಡಮಾನ್​-ನಿಕೋಬಾರ್​ನ ದಿಗ್ಲಿಪುರ್​ ಪ್ರದೇಶದಲ್ಲಿಯೂ ಕಂಪನ ಸಂಭವಿದೆ. ಭೂಕಂಪನ ಪ್ರಮಾಣ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿದೆ ಎಂದು ತಿಳಿದು ಬಂದಿದೆ. ಅದೃಷ್ಠವಶಾತ್‌ ಎಲ್ಲಿಯೂ ಯಾವುದೇ ಹಾನಿಗಳು ಸಂಭವಿಸಿದ ಕುರಿತು ವರದಿಯಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು