1:05 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ದೇಶದ ನಾನಾ ಕಡೆಗಳಲ್ಲಿ ಕಂಪಿಸಿದ ಭೂಮಿ: ತಿರುಪತಿಯಲ್ಲಿ 3.6, ಲಡಾಖ್​​ನಲ್ಲಿ 4.3ರಷ್ಟು ತೀವ್ರತೆ ದಾಖಲು

03/04/2022, 18:18

ಹೊಸದಿಲ್ಲಿ(reporterkarnataka.com); ದೇಶದ ವಿವಿಧೆಡೆಗಳಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆ ವರೆಗೆ ಭೂಕಂಪಗಳು ಸಂಭವಿಸಿವೆ. 

ಆಂಧ್ರಪ್ರದೇಶದ ತಿರುಪತಿಯಲ್ಲಿ ಭಾನುವಾರ ಬೆಳಗಿನ ಜಾವ 1.10 ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ತಿರುಪತಿಯಿಂದ ಈಶಾನ್ಯಕ್ಕೆ 85 ಕಿಮೀ ದೂರದಲ್ಲಿ ಭೂಗರ್ಭದ 20 ಕಿಮೀ ಆಳದಲ್ಲಿ ಕಂಪನದ ಕೇಂದ್ರವಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದಿಂದ ಯಾವುದೇ ಹಾನಿಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಲಡಾಖ್​​, ಅಂಡಮಾನ್ ನಲ್ಲೂ ಭೂಕಂಪನ:

ಜಮ್ಮು-ಕಾಶ್ಮೀರದ ಲಡಾಖ್​​ನಲ್ಲಿರುವ ಅಲ್ಚಿ ಪ್ರದೇಶದ ಉತ್ತರದಲ್ಲಿ ಇಂದು ಬೆಳಗ್ಗೆ7.29ರ ಭೂಮಿ ಕಂಪಿಸಿದೆ. ಭೂಕಂಪದ ತೀವ್ರತೆ ರಿಕ್ಟರ್​ ಮಾಪಕದಲ್ಲಿ 4.3ರಷ್ಟು ದಾಖಲಾಗಿದೆ. ಶನಿವಾರ ರಾತ್ರಿ 2.5೦ರ ಸುಮಾರಿಗೆ ಅಂಡಮಾನ್​-ನಿಕೋಬಾರ್​ನ ದಿಗ್ಲಿಪುರ್​ ಪ್ರದೇಶದಲ್ಲಿಯೂ ಕಂಪನ ಸಂಭವಿದೆ. ಭೂಕಂಪನ ಪ್ರಮಾಣ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿದೆ ಎಂದು ತಿಳಿದು ಬಂದಿದೆ. ಅದೃಷ್ಠವಶಾತ್‌ ಎಲ್ಲಿಯೂ ಯಾವುದೇ ಹಾನಿಗಳು ಸಂಭವಿಸಿದ ಕುರಿತು ವರದಿಯಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು