12:45 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದೇಶದ ನಾನಾ ಕಡೆಗಳಲ್ಲಿ ಕಂಪಿಸಿದ ಭೂಮಿ: ತಿರುಪತಿಯಲ್ಲಿ 3.6, ಲಡಾಖ್​​ನಲ್ಲಿ 4.3ರಷ್ಟು ತೀವ್ರತೆ ದಾಖಲು

03/04/2022, 18:18

ಹೊಸದಿಲ್ಲಿ(reporterkarnataka.com); ದೇಶದ ವಿವಿಧೆಡೆಗಳಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆ ವರೆಗೆ ಭೂಕಂಪಗಳು ಸಂಭವಿಸಿವೆ. 

ಆಂಧ್ರಪ್ರದೇಶದ ತಿರುಪತಿಯಲ್ಲಿ ಭಾನುವಾರ ಬೆಳಗಿನ ಜಾವ 1.10 ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ತಿರುಪತಿಯಿಂದ ಈಶಾನ್ಯಕ್ಕೆ 85 ಕಿಮೀ ದೂರದಲ್ಲಿ ಭೂಗರ್ಭದ 20 ಕಿಮೀ ಆಳದಲ್ಲಿ ಕಂಪನದ ಕೇಂದ್ರವಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದಿಂದ ಯಾವುದೇ ಹಾನಿಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಲಡಾಖ್​​, ಅಂಡಮಾನ್ ನಲ್ಲೂ ಭೂಕಂಪನ:

ಜಮ್ಮು-ಕಾಶ್ಮೀರದ ಲಡಾಖ್​​ನಲ್ಲಿರುವ ಅಲ್ಚಿ ಪ್ರದೇಶದ ಉತ್ತರದಲ್ಲಿ ಇಂದು ಬೆಳಗ್ಗೆ7.29ರ ಭೂಮಿ ಕಂಪಿಸಿದೆ. ಭೂಕಂಪದ ತೀವ್ರತೆ ರಿಕ್ಟರ್​ ಮಾಪಕದಲ್ಲಿ 4.3ರಷ್ಟು ದಾಖಲಾಗಿದೆ. ಶನಿವಾರ ರಾತ್ರಿ 2.5೦ರ ಸುಮಾರಿಗೆ ಅಂಡಮಾನ್​-ನಿಕೋಬಾರ್​ನ ದಿಗ್ಲಿಪುರ್​ ಪ್ರದೇಶದಲ್ಲಿಯೂ ಕಂಪನ ಸಂಭವಿದೆ. ಭೂಕಂಪನ ಪ್ರಮಾಣ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿದೆ ಎಂದು ತಿಳಿದು ಬಂದಿದೆ. ಅದೃಷ್ಠವಶಾತ್‌ ಎಲ್ಲಿಯೂ ಯಾವುದೇ ಹಾನಿಗಳು ಸಂಭವಿಸಿದ ಕುರಿತು ವರದಿಯಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು