10:04 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ದೇಶ ಭಕ್ತಿ, ಸಮರ್ಪಣಾ ಮನೋಭಾವ ಸರ್ವರಲ್ಲಿಯೂ ಇರಬೇಕು: ಶಾಸಕ ಡಾ.ಭರತ್ ಶೆಟ್ಟಿ

18/10/2023, 16:16

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ದೇಶದ ಮೇಲೆ ಪ್ರೀತಿ, ಸಮರ್ಪಣಾ ಮನೋಭಾವ ದೇಶದ ಪ್ರತೀ ಪ್ರಜೆಯಲ್ಲಿಯೂ ಇದ್ದಾಗ ಎಂತಹ ಸಂಕಷ್ಟ ಬಂದರೂ ಎದುರಿಸಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ವೀರ ಸ್ಮರಣೆಗಾಗಿ ಹಮ್ಮಿಕೊಂಡಿರುವ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮ ಐತಿಹಾಸಿಕ ನಡೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.




ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕನ್ನಡ ಸಂಸ್ಕøತಿ ಇಲಾಖೆ, ಅಂಚೆ ಇಲಾಖೆ,ಲೀಡ್ ಬ್ಯಾಂಕ್, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ಹಾಗೂ ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದೊಂದಿಗೆ ಮೇರಿ ಮಾಟಿ ಮೇರಾ ದೇಶ್ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಅಂಗವಾಗಿ ಅಮೃತ ಕಲಶ ಯಾತ್ರೆ ಯ ಸಮಾರೋಪ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಾತೃಭೂಮಿ ಎಂದು ಬಂದಾಗ ನಾವೆಲ್ಲಾ ಸಮರ್ಪಣಾ ಮನೋಭಾವ ಹೊಂದ ಬೇಕು.ದೇಶದ ವೀರ ಸ್ವಾತಂತ್ರ್ಯ ಹೋರಾಟಗಾರರು, ನಮ್ಮನ್ನು ಕಾಪಾಡುವಲ್ಲಿ ಬಲಿದಾನವನ್ನು ಮಾಡಿದ ವೀರ ಯೋಧರ ಸ್ಮರಣೆಯಲ್ಲಿ ರಾಜಧಾನಿಯಲ್ಲಿ ಉದ್ಯಾನವನ ನಿರ್ಮಾಣ ಆ ಮೂಲಕ ನಮ್ಮ ಮುಂದಿನ ಪೀಳಿಗೆಯಲ್ಲಿ ಸದಾ ಜಾಗೃತಿ ಮನಸ್ಥಿತಿಯನ್ನು ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ,ನೆಹರು ಯುವ ಕೇಂದ್ರದ ಜಗದೀಶ್, ಅಂಚೆ ಇಲಾಖೆಯ ಅಧಿಕಾರಿಗಳಾದ ಶಂಕರ್, ಆಡಳಿತಾಧಿಕಾರಿ ತಾಲೂಕು ಪಂಚಾಯತ್ ರವಿಕುಮಾರ್, ರಾಷ್ಟ್ರೀಯ ಸೇವಾ ಯೋಜನೆ ಪ್ರಮುಖರಾದ ನಾಗರತ್ನ, ಉದಯ್ ಕುಮಾರ್. ತಾಲೂಕು ಪಂಚಾಯತ್ ನಿರ್ದೇಶಕ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು