1:30 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ದೇಶ ಭಕ್ತಿ, ಸಮರ್ಪಣಾ ಮನೋಭಾವ ಸರ್ವರಲ್ಲಿಯೂ ಇರಬೇಕು: ಶಾಸಕ ಡಾ.ಭರತ್ ಶೆಟ್ಟಿ

18/10/2023, 16:16

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ದೇಶದ ಮೇಲೆ ಪ್ರೀತಿ, ಸಮರ್ಪಣಾ ಮನೋಭಾವ ದೇಶದ ಪ್ರತೀ ಪ್ರಜೆಯಲ್ಲಿಯೂ ಇದ್ದಾಗ ಎಂತಹ ಸಂಕಷ್ಟ ಬಂದರೂ ಎದುರಿಸಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ವೀರ ಸ್ಮರಣೆಗಾಗಿ ಹಮ್ಮಿಕೊಂಡಿರುವ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮ ಐತಿಹಾಸಿಕ ನಡೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.




ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕನ್ನಡ ಸಂಸ್ಕøತಿ ಇಲಾಖೆ, ಅಂಚೆ ಇಲಾಖೆ,ಲೀಡ್ ಬ್ಯಾಂಕ್, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ಹಾಗೂ ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದೊಂದಿಗೆ ಮೇರಿ ಮಾಟಿ ಮೇರಾ ದೇಶ್ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಅಂಗವಾಗಿ ಅಮೃತ ಕಲಶ ಯಾತ್ರೆ ಯ ಸಮಾರೋಪ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಾತೃಭೂಮಿ ಎಂದು ಬಂದಾಗ ನಾವೆಲ್ಲಾ ಸಮರ್ಪಣಾ ಮನೋಭಾವ ಹೊಂದ ಬೇಕು.ದೇಶದ ವೀರ ಸ್ವಾತಂತ್ರ್ಯ ಹೋರಾಟಗಾರರು, ನಮ್ಮನ್ನು ಕಾಪಾಡುವಲ್ಲಿ ಬಲಿದಾನವನ್ನು ಮಾಡಿದ ವೀರ ಯೋಧರ ಸ್ಮರಣೆಯಲ್ಲಿ ರಾಜಧಾನಿಯಲ್ಲಿ ಉದ್ಯಾನವನ ನಿರ್ಮಾಣ ಆ ಮೂಲಕ ನಮ್ಮ ಮುಂದಿನ ಪೀಳಿಗೆಯಲ್ಲಿ ಸದಾ ಜಾಗೃತಿ ಮನಸ್ಥಿತಿಯನ್ನು ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ,ನೆಹರು ಯುವ ಕೇಂದ್ರದ ಜಗದೀಶ್, ಅಂಚೆ ಇಲಾಖೆಯ ಅಧಿಕಾರಿಗಳಾದ ಶಂಕರ್, ಆಡಳಿತಾಧಿಕಾರಿ ತಾಲೂಕು ಪಂಚಾಯತ್ ರವಿಕುಮಾರ್, ರಾಷ್ಟ್ರೀಯ ಸೇವಾ ಯೋಜನೆ ಪ್ರಮುಖರಾದ ನಾಗರತ್ನ, ಉದಯ್ ಕುಮಾರ್. ತಾಲೂಕು ಪಂಚಾಯತ್ ನಿರ್ದೇಶಕ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು