8:54 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ದೇಶದಲ್ಲಿ ಖಾದ್ಯ ತೈಲದ ಕೊರತೆ ಇದೆಯೇ?: ಕೇಂದ್ರ ಸರಕಾರ ಈ ಕುರಿತು ಹೇಳಿದ್ದೇನು..?

02/05/2022, 11:09

ಹೊಸದಿಲ್ಲಿ(reporterkarnataka.com); ದೇಶದಲ್ಲಿ ಅಡುಗೆ ಎಣ್ಣೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿ ಖಾದ್ಯ ತೈಲದ ಕೊರತೆ ಇಲ್ಲ ಎನ್ನುವ ಮೂಲಕ ಸ್ವಲ್ಪ ನಿರಾಳ ನೀಡಿದೆ.

ದೇಶದಲ್ಲಿ ಸಾಕಷ್ಟು ಅಡುಗೆ ಎಣ್ಣೆ ಸಂಗ್ರಹವಿದೆ.ಪ್ರಸ್ತುತ 21 ಲಕ್ಷ ಮೆಟ್ರಿಕ್​ ಟನ್​ ಇದ್ದು, ಮೇ ಅಂತ್ಯದೊಳಗೆ ಇನ್ನು 12 ಲಕ್ಷ ಮೆಟ್ರಿಕ್​ ಟನ್​ ಎಣ್ಣೆ ಆಮದಾಗಲಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಕಳೆದ ವರ್ಷಕ್ಕಿಂತ ಸೋಯಾಬಿನ್​ ಉತ್ಪಾದನೆಯಲ್ಲಿ ಈ ವರ್ಷ ದುಪ್ಪಟ್ಟಾಗಿದ್ದು, 126.02 ಲಕ್ಷ ಮೆಟ್ರಿಕ್​ ಟನ್​ ಸಂಗ್ರಹವಾಗಿದ್ದು, ಸಾಸಿವೆ ಎಣ್ಣೆ ಸಹ ಶೇ.37ರಷ್ಟು ಅಧಿಕ ಉತ್ಪಾದನೆಯಾಗಿದೆ ಹಾಗಾಗಿ ಸದ್ಯ ಅಡುಗೆ ಎಣ್ಣೆಯ ಕೊರತೆ ಇಲ್ಲ ಎಂದು ಹೇಳಿದೆ.

ಸದ್ಯ ಇಂಡೋನೇಷ್ಯಾಗೆ ರಫ್ತಾಗುತ್ತಿದ್ದನ್ನು ಸ್ಥಗಿತಗೊಳಿಸಿರುವುದರಿಂದ ತಾಳೆ ಎಣ್ಣೆ ಸಹ ಸಾಕಷ್ಟಿದೆ. ಸದ್ಯಕ್ಕೆ ಯಾವುದೇ ಕೊರತೆ ಇಲ್ಲ ಎಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು