8:24 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ದೇಶದಲ್ಲಿ ಖಾದ್ಯ ತೈಲದ ಕೊರತೆ ಇದೆಯೇ?: ಕೇಂದ್ರ ಸರಕಾರ ಈ ಕುರಿತು ಹೇಳಿದ್ದೇನು..?

02/05/2022, 11:09

ಹೊಸದಿಲ್ಲಿ(reporterkarnataka.com); ದೇಶದಲ್ಲಿ ಅಡುಗೆ ಎಣ್ಣೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿ ಖಾದ್ಯ ತೈಲದ ಕೊರತೆ ಇಲ್ಲ ಎನ್ನುವ ಮೂಲಕ ಸ್ವಲ್ಪ ನಿರಾಳ ನೀಡಿದೆ.

ದೇಶದಲ್ಲಿ ಸಾಕಷ್ಟು ಅಡುಗೆ ಎಣ್ಣೆ ಸಂಗ್ರಹವಿದೆ.ಪ್ರಸ್ತುತ 21 ಲಕ್ಷ ಮೆಟ್ರಿಕ್​ ಟನ್​ ಇದ್ದು, ಮೇ ಅಂತ್ಯದೊಳಗೆ ಇನ್ನು 12 ಲಕ್ಷ ಮೆಟ್ರಿಕ್​ ಟನ್​ ಎಣ್ಣೆ ಆಮದಾಗಲಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಕಳೆದ ವರ್ಷಕ್ಕಿಂತ ಸೋಯಾಬಿನ್​ ಉತ್ಪಾದನೆಯಲ್ಲಿ ಈ ವರ್ಷ ದುಪ್ಪಟ್ಟಾಗಿದ್ದು, 126.02 ಲಕ್ಷ ಮೆಟ್ರಿಕ್​ ಟನ್​ ಸಂಗ್ರಹವಾಗಿದ್ದು, ಸಾಸಿವೆ ಎಣ್ಣೆ ಸಹ ಶೇ.37ರಷ್ಟು ಅಧಿಕ ಉತ್ಪಾದನೆಯಾಗಿದೆ ಹಾಗಾಗಿ ಸದ್ಯ ಅಡುಗೆ ಎಣ್ಣೆಯ ಕೊರತೆ ಇಲ್ಲ ಎಂದು ಹೇಳಿದೆ.

ಸದ್ಯ ಇಂಡೋನೇಷ್ಯಾಗೆ ರಫ್ತಾಗುತ್ತಿದ್ದನ್ನು ಸ್ಥಗಿತಗೊಳಿಸಿರುವುದರಿಂದ ತಾಳೆ ಎಣ್ಣೆ ಸಹ ಸಾಕಷ್ಟಿದೆ. ಸದ್ಯಕ್ಕೆ ಯಾವುದೇ ಕೊರತೆ ಇಲ್ಲ ಎಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು