1:04 AM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ದೇಶದಲ್ಲಿ ಪ್ರತಿ ವರ್ಷ 17 ಲಕ್ಷ ಟನ್ ಗೋಡಂಬಿಗೆ ಬೇಡಿಕೆ; ಆದರೆ 8 ಲಕ್ಷ ಟನ್ ಮಾತ್ರ ಉತ್ಪನ್ನ

22/05/2021, 09:20

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnatak@gmail.com

ಕೋಲಾರ ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಗೋಡಂಬಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. 

ಭಾರತದಲ್ಲಿ ಸುಮಾರು 3800 ರಷ್ಟು ಗೋಡಂಬಿ ಸಂಸ್ಕರಣಾ ಘಟಕಗಳಿಂದ ಪ್ರತಿ ವರ್ಷ 17 ಲಕ್ಷ ಟನ್ ಬೇಡಿಕೆ ಇದೆ. ಆದರೆ ನಮ್ಮ ದೇಶದಲ್ಲಿ ಸುಮಾರು 7.5 ರಿಂದ 8 ಲಕ್ಷ ಟನ್ ಮಾತ್ರ ದೊರೆಯುತ್ತಿದೆ. ಗೋಡಂಬಿ ಬೆಳೆಗೆ ಸಾಕಷ್ಟು ಬೇಡಿಕೆ ಇದ್ದು ರೈತರು ಹೆಚ್ಚೆಚ್ಚು ಬೆಳೆಯಲು ಮುಂದಾಗಬೇಕೆಂದು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ. ಅಶ್ವಥ್ ನಾರಾಯಣ ರೆಡ್ಡಿ, ಸಹಾಯಕ ಪ್ರಾಧ್ಯಾಪಕರು, ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರ ಇವರು ಹೇಳಿದರು. 

2019ರ ಅಧ್ಯಯನದ ಪ್ರಕಾರ ಗೋಡಂಬಿಗೆ 390 ಕೀಟಗಳು ಬಾಧಿಸುತ್ತಿವೆ. ಅದರಲ್ಲಿ ಪ್ರಮುಖವಾದವು ಟಿ -ಸೊಳ್ಳೆ, ಕಾಂಡ ಕೊರೆಯುವ ಹುಳು ಮತ್ತು ಸುರಂಗ ಕೀಟದ ಜೀವನ ಚಕ್ರ, ಕೀಟ ಬಾಧಿತ ಗಿಡದ ಲಕ್ಷಣಗಳು ಮತ್ತು ನಿರ್ವಹಣೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಅಲ್ಲದೆ ರಾಜ್ಯಾದ್ಯಂತ ಸುಮಾರು ಐವತ್ತಕ್ಕೂ ಹೆಚ್ಚು ರೈತರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಗಾಯತ್ರಿ, ಕಾರ್ಯಾಗಾರದ ಸಂಯೋಜಕಿ ಡಾ. ಅಂಬಿಕಾ ಡಿ.ಎಸ್, ವಿಜ್ಞಾನಿ, ಕೃಷಿ ವಿಜ್ಞಾನ ಕೇಂದ್ರ,ಕೋಲಾರ, ಗೋಡಂಬಿ ಬೆಳೆಗಾರರು, ವಿಸ್ತರಣಾಧಿಕಾರಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ, ವಿಜ್ಞಾನಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು