5:42 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ದೇಶದಲ್ಲಿ ಪ್ರತಿ ವರ್ಷ 17 ಲಕ್ಷ ಟನ್ ಗೋಡಂಬಿಗೆ ಬೇಡಿಕೆ; ಆದರೆ 8 ಲಕ್ಷ ಟನ್ ಮಾತ್ರ ಉತ್ಪನ್ನ

22/05/2021, 09:20

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnatak@gmail.com

ಕೋಲಾರ ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಗೋಡಂಬಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. 

ಭಾರತದಲ್ಲಿ ಸುಮಾರು 3800 ರಷ್ಟು ಗೋಡಂಬಿ ಸಂಸ್ಕರಣಾ ಘಟಕಗಳಿಂದ ಪ್ರತಿ ವರ್ಷ 17 ಲಕ್ಷ ಟನ್ ಬೇಡಿಕೆ ಇದೆ. ಆದರೆ ನಮ್ಮ ದೇಶದಲ್ಲಿ ಸುಮಾರು 7.5 ರಿಂದ 8 ಲಕ್ಷ ಟನ್ ಮಾತ್ರ ದೊರೆಯುತ್ತಿದೆ. ಗೋಡಂಬಿ ಬೆಳೆಗೆ ಸಾಕಷ್ಟು ಬೇಡಿಕೆ ಇದ್ದು ರೈತರು ಹೆಚ್ಚೆಚ್ಚು ಬೆಳೆಯಲು ಮುಂದಾಗಬೇಕೆಂದು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ. ಅಶ್ವಥ್ ನಾರಾಯಣ ರೆಡ್ಡಿ, ಸಹಾಯಕ ಪ್ರಾಧ್ಯಾಪಕರು, ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರ ಇವರು ಹೇಳಿದರು. 

2019ರ ಅಧ್ಯಯನದ ಪ್ರಕಾರ ಗೋಡಂಬಿಗೆ 390 ಕೀಟಗಳು ಬಾಧಿಸುತ್ತಿವೆ. ಅದರಲ್ಲಿ ಪ್ರಮುಖವಾದವು ಟಿ -ಸೊಳ್ಳೆ, ಕಾಂಡ ಕೊರೆಯುವ ಹುಳು ಮತ್ತು ಸುರಂಗ ಕೀಟದ ಜೀವನ ಚಕ್ರ, ಕೀಟ ಬಾಧಿತ ಗಿಡದ ಲಕ್ಷಣಗಳು ಮತ್ತು ನಿರ್ವಹಣೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಅಲ್ಲದೆ ರಾಜ್ಯಾದ್ಯಂತ ಸುಮಾರು ಐವತ್ತಕ್ಕೂ ಹೆಚ್ಚು ರೈತರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಗಾಯತ್ರಿ, ಕಾರ್ಯಾಗಾರದ ಸಂಯೋಜಕಿ ಡಾ. ಅಂಬಿಕಾ ಡಿ.ಎಸ್, ವಿಜ್ಞಾನಿ, ಕೃಷಿ ವಿಜ್ಞಾನ ಕೇಂದ್ರ,ಕೋಲಾರ, ಗೋಡಂಬಿ ಬೆಳೆಗಾರರು, ವಿಸ್ತರಣಾಧಿಕಾರಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ, ವಿಜ್ಞಾನಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು