9:45 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ದೇಶ ವಿಭಜನೆಗೆ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ: ಸಿ.ಟಿ. ರವಿ

02/10/2022, 18:07

ಸಂತೋಷ್ ಅತ್ತಿಕೆರೆ ಚಿಕ್ಕಮಂಗಳೂರು

info.reporterkarnataka@gmail.com

ಭಾರತವನ್ನ ತುಂಡರಿಸುವಾಗ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ. ಕೋಟ್ಯಂತರ ಜೀವವನ್ನ ಮತಾಂಧರ ಕೈಗೆ ಕೊಟ್ಟದ್ದು ಕಾಂಗ್ರೆಸ್. ದೇಶ ವಿಭಜನೆಯ ಬಗ್ಗೆ  ಕಾಂಗ್ರೆಸ್ಸಿಗೆ ಪಶ್ಚಾತ್ತಾಪ ಇದೆಯೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.

ಮಾಧ್ಯಮ ಜತೆ ಭಾನುವಾರ ಮಾತನಾಡಿದ ಅವರು,ಮಹಿಳೆಯರು ಮಾನ-ಪ್ರಾಣ ಉಳಿಸಿಕೊಳ್ಳಲಾಗದೆ ಸಾಯಬೇಕಾಯ್ತು. ಇಂತಹಾ ವಿಭಜಿತ ಭಾರತವನ್ನ ಸ್ವಾತಂತ್ರ್ಯ ಹೋರಾಟಗಾರರು ನಿರೀಕ್ಷಿಸಿರಲಿಲ್ಲ ಎಂದರು.

ತುರ್ತು ಪರಿಸ್ಥಿತಿ ಹೇರಿಕೆ ನಮ್ಮಿಂದಾದ ಅಪರಾಧ ಅಂತ ವರ್ಷಗಳ ಬಳಿಕ ಕಾಂಗ್ರೆಸ್ ಪಶ್ಚಾತ್ತಾಪಪಟ್ಟಿತು. ಭಾರತ ವಿಭಜನೆಗೆ ಸಹಿ ಹಾಕಿದ್ದು ಅಪರಾಧ ಅಂತ ಕಾಂಗ್ರೆಸ್ಸಿಗೆ ಅನ್ನಿಸುತ್ತಾ 

ಎಂಬ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಾದಯಾತ್ರೆ ಮುಂದುವರೆಸಲಿ, ಆಗ ಅದಕ್ಕೊಂದು ಅರ್ಥವಿರುತ್ತದೆ. ಕಾಂಗ್ರೆಸ್ ನಿರ್ಬಲವಾಗುತ್ತಿದೆ, ಅದಕ್ಕೆ ರಾಹುಲ್ ಗಾಂಧಿಗೆ ಬಲ ತುಂಬಲು ಹೊರಟಿದ್ದಾರೆ  ಎಂದು ಅವರು ಲೇವಡಿ ಮಾಡಿದರು.

ಪ್ರಿಯಾಂಕ ವಾಡ್ರಾ ಅವರೇ ನೇತೃತ್ವ ವಹಿಸಿದ್ರು 387 ಸ್ಥಾನದಲ್ಲಿ ಡೆಪಾಜಿಟ್ ಹೊಯ್ತು. ನೀತಿ, ನಿಯತ್ತು, ನೇತೃತ್ವ ಇಲ್ಲದ ಕಡೆ ಬಲ ಸಿಗಲ್ಲ, ಕಾಂಗ್ರೆಸ್ಸಿಗೆ ಈ ಮೂರು ಇಲ್ಲ ಎಂದು ಸಿ.ಟಿ.ರವಿ ನುಡಿದರು

ಇತ್ತೀಚಿನ ಸುದ್ದಿ

ಜಾಹೀರಾತು