11:24 PM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ದೇಶ ವಿಭಜನೆಗೆ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ: ಸಿ.ಟಿ. ರವಿ

02/10/2022, 18:07

ಸಂತೋಷ್ ಅತ್ತಿಕೆರೆ ಚಿಕ್ಕಮಂಗಳೂರು

info.reporterkarnataka@gmail.com

ಭಾರತವನ್ನ ತುಂಡರಿಸುವಾಗ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ. ಕೋಟ್ಯಂತರ ಜೀವವನ್ನ ಮತಾಂಧರ ಕೈಗೆ ಕೊಟ್ಟದ್ದು ಕಾಂಗ್ರೆಸ್. ದೇಶ ವಿಭಜನೆಯ ಬಗ್ಗೆ  ಕಾಂಗ್ರೆಸ್ಸಿಗೆ ಪಶ್ಚಾತ್ತಾಪ ಇದೆಯೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.

ಮಾಧ್ಯಮ ಜತೆ ಭಾನುವಾರ ಮಾತನಾಡಿದ ಅವರು,ಮಹಿಳೆಯರು ಮಾನ-ಪ್ರಾಣ ಉಳಿಸಿಕೊಳ್ಳಲಾಗದೆ ಸಾಯಬೇಕಾಯ್ತು. ಇಂತಹಾ ವಿಭಜಿತ ಭಾರತವನ್ನ ಸ್ವಾತಂತ್ರ್ಯ ಹೋರಾಟಗಾರರು ನಿರೀಕ್ಷಿಸಿರಲಿಲ್ಲ ಎಂದರು.

ತುರ್ತು ಪರಿಸ್ಥಿತಿ ಹೇರಿಕೆ ನಮ್ಮಿಂದಾದ ಅಪರಾಧ ಅಂತ ವರ್ಷಗಳ ಬಳಿಕ ಕಾಂಗ್ರೆಸ್ ಪಶ್ಚಾತ್ತಾಪಪಟ್ಟಿತು. ಭಾರತ ವಿಭಜನೆಗೆ ಸಹಿ ಹಾಕಿದ್ದು ಅಪರಾಧ ಅಂತ ಕಾಂಗ್ರೆಸ್ಸಿಗೆ ಅನ್ನಿಸುತ್ತಾ 

ಎಂಬ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಾದಯಾತ್ರೆ ಮುಂದುವರೆಸಲಿ, ಆಗ ಅದಕ್ಕೊಂದು ಅರ್ಥವಿರುತ್ತದೆ. ಕಾಂಗ್ರೆಸ್ ನಿರ್ಬಲವಾಗುತ್ತಿದೆ, ಅದಕ್ಕೆ ರಾಹುಲ್ ಗಾಂಧಿಗೆ ಬಲ ತುಂಬಲು ಹೊರಟಿದ್ದಾರೆ  ಎಂದು ಅವರು ಲೇವಡಿ ಮಾಡಿದರು.

ಪ್ರಿಯಾಂಕ ವಾಡ್ರಾ ಅವರೇ ನೇತೃತ್ವ ವಹಿಸಿದ್ರು 387 ಸ್ಥಾನದಲ್ಲಿ ಡೆಪಾಜಿಟ್ ಹೊಯ್ತು. ನೀತಿ, ನಿಯತ್ತು, ನೇತೃತ್ವ ಇಲ್ಲದ ಕಡೆ ಬಲ ಸಿಗಲ್ಲ, ಕಾಂಗ್ರೆಸ್ಸಿಗೆ ಈ ಮೂರು ಇಲ್ಲ ಎಂದು ಸಿ.ಟಿ.ರವಿ ನುಡಿದರು

ಇತ್ತೀಚಿನ ಸುದ್ದಿ

ಜಾಹೀರಾತು