1:46 PM Friday1 - May 2026
ಬ್ರೇಕಿಂಗ್ ನ್ಯೂಸ್
ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು…

ಇತ್ತೀಚಿನ ಸುದ್ದಿ

ದೇಶ ವಿಭಜನೆಗೆ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ: ಸಿ.ಟಿ. ರವಿ

02/10/2022, 18:07

ಸಂತೋಷ್ ಅತ್ತಿಕೆರೆ ಚಿಕ್ಕಮಂಗಳೂರು

info.reporterkarnataka@gmail.com

ಭಾರತವನ್ನ ತುಂಡರಿಸುವಾಗ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ. ಕೋಟ್ಯಂತರ ಜೀವವನ್ನ ಮತಾಂಧರ ಕೈಗೆ ಕೊಟ್ಟದ್ದು ಕಾಂಗ್ರೆಸ್. ದೇಶ ವಿಭಜನೆಯ ಬಗ್ಗೆ  ಕಾಂಗ್ರೆಸ್ಸಿಗೆ ಪಶ್ಚಾತ್ತಾಪ ಇದೆಯೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.

ಮಾಧ್ಯಮ ಜತೆ ಭಾನುವಾರ ಮಾತನಾಡಿದ ಅವರು,ಮಹಿಳೆಯರು ಮಾನ-ಪ್ರಾಣ ಉಳಿಸಿಕೊಳ್ಳಲಾಗದೆ ಸಾಯಬೇಕಾಯ್ತು. ಇಂತಹಾ ವಿಭಜಿತ ಭಾರತವನ್ನ ಸ್ವಾತಂತ್ರ್ಯ ಹೋರಾಟಗಾರರು ನಿರೀಕ್ಷಿಸಿರಲಿಲ್ಲ ಎಂದರು.

ತುರ್ತು ಪರಿಸ್ಥಿತಿ ಹೇರಿಕೆ ನಮ್ಮಿಂದಾದ ಅಪರಾಧ ಅಂತ ವರ್ಷಗಳ ಬಳಿಕ ಕಾಂಗ್ರೆಸ್ ಪಶ್ಚಾತ್ತಾಪಪಟ್ಟಿತು. ಭಾರತ ವಿಭಜನೆಗೆ ಸಹಿ ಹಾಕಿದ್ದು ಅಪರಾಧ ಅಂತ ಕಾಂಗ್ರೆಸ್ಸಿಗೆ ಅನ್ನಿಸುತ್ತಾ 

ಎಂಬ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಾದಯಾತ್ರೆ ಮುಂದುವರೆಸಲಿ, ಆಗ ಅದಕ್ಕೊಂದು ಅರ್ಥವಿರುತ್ತದೆ. ಕಾಂಗ್ರೆಸ್ ನಿರ್ಬಲವಾಗುತ್ತಿದೆ, ಅದಕ್ಕೆ ರಾಹುಲ್ ಗಾಂಧಿಗೆ ಬಲ ತುಂಬಲು ಹೊರಟಿದ್ದಾರೆ  ಎಂದು ಅವರು ಲೇವಡಿ ಮಾಡಿದರು.

ಪ್ರಿಯಾಂಕ ವಾಡ್ರಾ ಅವರೇ ನೇತೃತ್ವ ವಹಿಸಿದ್ರು 387 ಸ್ಥಾನದಲ್ಲಿ ಡೆಪಾಜಿಟ್ ಹೊಯ್ತು. ನೀತಿ, ನಿಯತ್ತು, ನೇತೃತ್ವ ಇಲ್ಲದ ಕಡೆ ಬಲ ಸಿಗಲ್ಲ, ಕಾಂಗ್ರೆಸ್ಸಿಗೆ ಈ ಮೂರು ಇಲ್ಲ ಎಂದು ಸಿ.ಟಿ.ರವಿ ನುಡಿದರು

ಇತ್ತೀಚಿನ ಸುದ್ದಿ

ಜಾಹೀರಾತು