5:04 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದೇಶ ವಿಭಜನೆಗೆ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ: ಸಿ.ಟಿ. ರವಿ

02/10/2022, 18:07

ಸಂತೋಷ್ ಅತ್ತಿಕೆರೆ ಚಿಕ್ಕಮಂಗಳೂರು

info.reporterkarnataka@gmail.com

ಭಾರತವನ್ನ ತುಂಡರಿಸುವಾಗ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ. ಕೋಟ್ಯಂತರ ಜೀವವನ್ನ ಮತಾಂಧರ ಕೈಗೆ ಕೊಟ್ಟದ್ದು ಕಾಂಗ್ರೆಸ್. ದೇಶ ವಿಭಜನೆಯ ಬಗ್ಗೆ  ಕಾಂಗ್ರೆಸ್ಸಿಗೆ ಪಶ್ಚಾತ್ತಾಪ ಇದೆಯೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.

ಮಾಧ್ಯಮ ಜತೆ ಭಾನುವಾರ ಮಾತನಾಡಿದ ಅವರು,ಮಹಿಳೆಯರು ಮಾನ-ಪ್ರಾಣ ಉಳಿಸಿಕೊಳ್ಳಲಾಗದೆ ಸಾಯಬೇಕಾಯ್ತು. ಇಂತಹಾ ವಿಭಜಿತ ಭಾರತವನ್ನ ಸ್ವಾತಂತ್ರ್ಯ ಹೋರಾಟಗಾರರು ನಿರೀಕ್ಷಿಸಿರಲಿಲ್ಲ ಎಂದರು.

ತುರ್ತು ಪರಿಸ್ಥಿತಿ ಹೇರಿಕೆ ನಮ್ಮಿಂದಾದ ಅಪರಾಧ ಅಂತ ವರ್ಷಗಳ ಬಳಿಕ ಕಾಂಗ್ರೆಸ್ ಪಶ್ಚಾತ್ತಾಪಪಟ್ಟಿತು. ಭಾರತ ವಿಭಜನೆಗೆ ಸಹಿ ಹಾಕಿದ್ದು ಅಪರಾಧ ಅಂತ ಕಾಂಗ್ರೆಸ್ಸಿಗೆ ಅನ್ನಿಸುತ್ತಾ 

ಎಂಬ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಾದಯಾತ್ರೆ ಮುಂದುವರೆಸಲಿ, ಆಗ ಅದಕ್ಕೊಂದು ಅರ್ಥವಿರುತ್ತದೆ. ಕಾಂಗ್ರೆಸ್ ನಿರ್ಬಲವಾಗುತ್ತಿದೆ, ಅದಕ್ಕೆ ರಾಹುಲ್ ಗಾಂಧಿಗೆ ಬಲ ತುಂಬಲು ಹೊರಟಿದ್ದಾರೆ  ಎಂದು ಅವರು ಲೇವಡಿ ಮಾಡಿದರು.

ಪ್ರಿಯಾಂಕ ವಾಡ್ರಾ ಅವರೇ ನೇತೃತ್ವ ವಹಿಸಿದ್ರು 387 ಸ್ಥಾನದಲ್ಲಿ ಡೆಪಾಜಿಟ್ ಹೊಯ್ತು. ನೀತಿ, ನಿಯತ್ತು, ನೇತೃತ್ವ ಇಲ್ಲದ ಕಡೆ ಬಲ ಸಿಗಲ್ಲ, ಕಾಂಗ್ರೆಸ್ಸಿಗೆ ಈ ಮೂರು ಇಲ್ಲ ಎಂದು ಸಿ.ಟಿ.ರವಿ ನುಡಿದರು

ಇತ್ತೀಚಿನ ಸುದ್ದಿ

ಜಾಹೀರಾತು