3:10 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ದೇಶದ ರಾಜಕೀಯ ಚಿತ್ರಣ ಬದಲಾಗಲು ಮಂಗಳೂರಿನ ಫಲಿತಾಂಶ ನಾಂದಿ ಹಾಡಲಿದೆ: ಸಚಿವ ಮಧು ಬಂಗಾರಪ್ಪ

24/09/2023, 18:40

ಮಂಗಳೂರು(reporterKarnataka.com): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸನ್ನು ಕೈಹಿಡಿಯಲುದ್ದಾರೆ. ಮತೀಯ ವಾದ, ಕೋಮುವಾದದ ಭಾವನಾತ್ಮಕ ವಿಚಾರಗಳಿಂದ ಜನ ವಿಮುಖರಾಗುತ್ತಿದ್ದಾರೆ ಎಂದು ಶಿಕ್ಷಣ ಸಚಿವ, ಮಂಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಉಸ್ತುವಾರಿ ಮಧು ಬಂಗಾರಪ್ಪ ಹೇಳಿದರು.


ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಯ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಕರೆದಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಕರ್ನಾಟಕ ಕಾಂಗ್ರೆಸ್ ಸರಕಾರ ಕೊಟ್ಟಿರುವ ಗ್ಯಾರೆಂಟಿಗಳು ಜನರ ಬದುಕನ್ನು ಬೆಳಗಿಸಿವೆ. ಇದರ ಪ್ರಭಾವ ಮುಂದಿನ ಚುನಾವಣೆಯಲ್ಲಿ ಪ್ರತಿಬಿಂಬಿತವಾಗಲಿದೆ ಎಂದು ಅವರು ನುಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಕಾರ್ಯಕರ್ತರ, ಸಂಘ ಸಂಸ್ಥೆಗಳ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸರ್ವೆ ನಡೆಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ಅವರು ಸಭೆಯ ಅಧ್ಯಕ್ಷ ವಹಿಸಿದ್ದರು.
ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್ ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಬಿ. ಇಬ್ರಾಹಿಂ, ಅಶೋಕ್ ಕುಮಾರ್ ರೈ, ಜೆ. ಆರ್. ಲೋಬೊ, ಮಿಥುನ್ ರೈ, ಇಬ್ರಾಹಿಂ ಕೊಡಿಜಾಲ್, ಶಶಿದರ್ ಹೆಗ್ಡೆ, ಲುಕ್ಮನ್ ಬಂಟ್ವಾಳ್, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಕೃಪಾ ಆಳ್ವಾ, ಅಶ್ವಿನ್ ಕುಮಾರ್ ರೈ,ಇನಾಯತ್ ಅಲಿ, ಜಿ ಕೃಷ್ಣಪ್ಪ, ಬ್ಲಾಕ್ ಅಧ್ಯಕ್ಷರುಗಳು , ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ನಾಯಕರು, ಮನಪಾ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು