1:08 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ದೇಶದ ವಾಣಿಜ್ಯ ನಗರಿಯ ಉದ್ಯಮ ದಿಗ್ಗಜರ ಜತೆ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಫಲಪ್ರದ ಮಾತುಕತೆ

28/01/2025, 23:27

ಮುಂಬೈ(reporterkarnataka.com): ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 (ಜಾಗತಿಕ ಹೂಡಿಕೆದಾರರ ಸಮಾವೇಶ) -ದ ಪೂರ್ವಭಾವಿ ಸಿದ್ಧತೆಗಳ ಭಾಗವಾಗಿ ಮಂಗಳವಾರ ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಏರ್ಪಡಿಸಿದ್ದ ರೋಡ್‌ಷೋ ತನ್ನ ಉದ್ದೇಶ ಸಾಧನೆಯಲ್ಲಿ ಯಶಸ್ವಿಯಾಗಿದೆ.
ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಅವರು, ಹಿಂಡಾಲ್ಕೊ ಇಂಡಸ್ಟ್ರೀಸ್‌, ವ್ಯಾನಿಟಿ ಕೇಸ್‌ ಗ್ರೂಪ್‌, ಆರ್‌ಪಿಜಿ ಗ್ರೂಪ್‌, ಜ್ಯೋತಿ ಲ್ಯಾಬ್ಸ್‌ ಮತ್ತು ಪಿಡಿಲೈಟ್‌ ಇಂಡಸ್ಟ್ರೀಸ್‌ನ ಪ್ರಮುಖರ ಜೊತೆ ಮಾತುಕತೆ ನಡೆಸಿದರು. ರಾಜ್ಯದಲ್ಲಿನ ಉದ್ಯಮ ಸ್ನೇಹಿ ವಾತಾವರಣ ಹಾಗೂ ಹೂಡಿಕೆದಾರರಿಗೆ ನೆರವಾಗುವ ಸುಲಲಿತ ಉದ್ದಿಮೆ ನೀತಿಯನ್ನು ಉದ್ಯಮ ಪ್ರಮುಖರಿಗೆ ವಿವರಿಸಿದರು. ಇನ್ವೆಸ್ಟ್‌ ಕರ್ನಾಟಕ ಸಮಾವೇಶದಲ್ಲಿ ಭಾಗವಹಿಸಲು ಔಪಚಾರಿಕ ಆಹ್ವಾನ ನೀಡಿದರು.

ರಾಜ್ಯದಲ್ಲಿನ ಸರಿಸಾಟಿಯಿಲ್ಲದ ಹೂಡಿಕೆ ಅವಕಾಶಗಳನ್ನು ಮುಂಬೈನ ಪ್ರಮುಖ ಉದ್ಯಮಗಳು ಮತ್ತು ಹೂಡಿಕೆದಾರರಿಗೆ ಪರಿಚಯಿಸಲು ಈ ರೋಡ್‌ಷೋ ನೆರವಾಯಿತು.
ಕರ್ನಾಟಕದಲ್ಲಿನ ತಮ್ಮ ಯೋಜನೆಗಳ ಬಗ್ಗೆ ಹಿಂಡಾಲ್ಕೊದ ಅಲುಮಿನಾ ವಹಿವಾಟಿನ ಸಿಇಒ ಸೌರಭ್‌ ಖೇಡೆಕರ್‌ ಅವರು ಕಂಪನಿಯ ಬದ್ಧತೆಯನ್ನು ಪುನರುಚ್ಚರಿಸಿದರು.
ವ್ಯಾನಿಟಿ ಕೇಸ್‌ ಗ್ರೂಪ್‌ನ ಸಿಇಒ ಸಮೀರ್‌ ಕೊಠಾರಿ ಅವರು ಹುಬ್ಬಳ್ಳಿ – ಧಾರವಾಡದಲ್ಲಿ ಪಾದರಕ್ಷೆ ತಯಾರಿಕಾ ಘಟಕ ಸ್ಥಾಪಿಸಲು ಒಲವು ವ್ಯಕ್ತಪಡಿಸಿದರು.
ಆರ್‌ಪಿಜಿ ಗ್ರೂಪ್‌ನ ವೈಸ್‌ ಚೇರ್ಮನ್‌ ಅನಂತ್‌ ಗೋಯೆಂಕಾ ಅವರ ಜೊತೆಗಿನ ಚರ್ಚೆಯಲ್ಲಿ ಆರ್‌ಪಿಜಿ ಸಮೂಹದ ಮೂಲಸೌಲಭ್ಯ, ಇಂಧನ, ಐಟಿ ಮತ್ತಿತರ ವಹಿವಾಟುಗಳ ವಿಸ್ತರಣೆಯು ಪ್ರಮುಖವಾಗಿ ಚರ್ಚಿಸಲಾಯಿತು.
ರಾಜ್ಯದಲ್ಲಿನ ತ್ವರಿತವಾಗಿ ಬಿಕರಿಯಾಗುವ ಗ್ರಾಹಕ ಉತ್ಪನ್ನಗಳ (ಎಫ್‌ಎಂಸಿಜಿ) ಕ್ಲಸ್ಟರ್‌ನಲ್ಲಿ ಹೂಡಿಕೆ ಮಾಡಲು ಸಚಿವ ಪಾಟೀಲ ಅವರು ಜ್ಯೋತಿ ಲ್ಯಾಬ್ಸ್‌ನ ಯೋಜನಾ ಮುಖ್ಯಸ್ಥ ಅನಂತ್‌ ರಾವ್‌ ಅವರಿಗೆ ಮನವಿ ಮಾಡಿಕೊಂಡರು.
ರಾಜ್ಯದ ನಿಯೋಗವು ಪಿಡಿಲೈಟ್‌ ಇಂಡಸ್ಟ್ರೀಸ್‌ನ ಮಾರಾಟ ಮುಖ್ಯಸ್ಥ ಸಂದೀಪ್‌ ಜೋಗ್ಲೆಕರ್‌ ಅವರ ಜೊತೆಗೂ ಸಮಾಲೋಚನೆ ನಡೆಸಿತು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಅವರು ಸಮಾಲೋಚನೆಗಳಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು