6:42 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದೇಶದ ವಾಣಿಜ್ಯ ನಗರಿಯ ಉದ್ಯಮ ದಿಗ್ಗಜರ ಜತೆ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಫಲಪ್ರದ ಮಾತುಕತೆ

28/01/2025, 23:27

ಮುಂಬೈ(reporterkarnataka.com): ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 (ಜಾಗತಿಕ ಹೂಡಿಕೆದಾರರ ಸಮಾವೇಶ) -ದ ಪೂರ್ವಭಾವಿ ಸಿದ್ಧತೆಗಳ ಭಾಗವಾಗಿ ಮಂಗಳವಾರ ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಏರ್ಪಡಿಸಿದ್ದ ರೋಡ್‌ಷೋ ತನ್ನ ಉದ್ದೇಶ ಸಾಧನೆಯಲ್ಲಿ ಯಶಸ್ವಿಯಾಗಿದೆ.
ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಅವರು, ಹಿಂಡಾಲ್ಕೊ ಇಂಡಸ್ಟ್ರೀಸ್‌, ವ್ಯಾನಿಟಿ ಕೇಸ್‌ ಗ್ರೂಪ್‌, ಆರ್‌ಪಿಜಿ ಗ್ರೂಪ್‌, ಜ್ಯೋತಿ ಲ್ಯಾಬ್ಸ್‌ ಮತ್ತು ಪಿಡಿಲೈಟ್‌ ಇಂಡಸ್ಟ್ರೀಸ್‌ನ ಪ್ರಮುಖರ ಜೊತೆ ಮಾತುಕತೆ ನಡೆಸಿದರು. ರಾಜ್ಯದಲ್ಲಿನ ಉದ್ಯಮ ಸ್ನೇಹಿ ವಾತಾವರಣ ಹಾಗೂ ಹೂಡಿಕೆದಾರರಿಗೆ ನೆರವಾಗುವ ಸುಲಲಿತ ಉದ್ದಿಮೆ ನೀತಿಯನ್ನು ಉದ್ಯಮ ಪ್ರಮುಖರಿಗೆ ವಿವರಿಸಿದರು. ಇನ್ವೆಸ್ಟ್‌ ಕರ್ನಾಟಕ ಸಮಾವೇಶದಲ್ಲಿ ಭಾಗವಹಿಸಲು ಔಪಚಾರಿಕ ಆಹ್ವಾನ ನೀಡಿದರು.

ರಾಜ್ಯದಲ್ಲಿನ ಸರಿಸಾಟಿಯಿಲ್ಲದ ಹೂಡಿಕೆ ಅವಕಾಶಗಳನ್ನು ಮುಂಬೈನ ಪ್ರಮುಖ ಉದ್ಯಮಗಳು ಮತ್ತು ಹೂಡಿಕೆದಾರರಿಗೆ ಪರಿಚಯಿಸಲು ಈ ರೋಡ್‌ಷೋ ನೆರವಾಯಿತು.
ಕರ್ನಾಟಕದಲ್ಲಿನ ತಮ್ಮ ಯೋಜನೆಗಳ ಬಗ್ಗೆ ಹಿಂಡಾಲ್ಕೊದ ಅಲುಮಿನಾ ವಹಿವಾಟಿನ ಸಿಇಒ ಸೌರಭ್‌ ಖೇಡೆಕರ್‌ ಅವರು ಕಂಪನಿಯ ಬದ್ಧತೆಯನ್ನು ಪುನರುಚ್ಚರಿಸಿದರು.
ವ್ಯಾನಿಟಿ ಕೇಸ್‌ ಗ್ರೂಪ್‌ನ ಸಿಇಒ ಸಮೀರ್‌ ಕೊಠಾರಿ ಅವರು ಹುಬ್ಬಳ್ಳಿ – ಧಾರವಾಡದಲ್ಲಿ ಪಾದರಕ್ಷೆ ತಯಾರಿಕಾ ಘಟಕ ಸ್ಥಾಪಿಸಲು ಒಲವು ವ್ಯಕ್ತಪಡಿಸಿದರು.
ಆರ್‌ಪಿಜಿ ಗ್ರೂಪ್‌ನ ವೈಸ್‌ ಚೇರ್ಮನ್‌ ಅನಂತ್‌ ಗೋಯೆಂಕಾ ಅವರ ಜೊತೆಗಿನ ಚರ್ಚೆಯಲ್ಲಿ ಆರ್‌ಪಿಜಿ ಸಮೂಹದ ಮೂಲಸೌಲಭ್ಯ, ಇಂಧನ, ಐಟಿ ಮತ್ತಿತರ ವಹಿವಾಟುಗಳ ವಿಸ್ತರಣೆಯು ಪ್ರಮುಖವಾಗಿ ಚರ್ಚಿಸಲಾಯಿತು.
ರಾಜ್ಯದಲ್ಲಿನ ತ್ವರಿತವಾಗಿ ಬಿಕರಿಯಾಗುವ ಗ್ರಾಹಕ ಉತ್ಪನ್ನಗಳ (ಎಫ್‌ಎಂಸಿಜಿ) ಕ್ಲಸ್ಟರ್‌ನಲ್ಲಿ ಹೂಡಿಕೆ ಮಾಡಲು ಸಚಿವ ಪಾಟೀಲ ಅವರು ಜ್ಯೋತಿ ಲ್ಯಾಬ್ಸ್‌ನ ಯೋಜನಾ ಮುಖ್ಯಸ್ಥ ಅನಂತ್‌ ರಾವ್‌ ಅವರಿಗೆ ಮನವಿ ಮಾಡಿಕೊಂಡರು.
ರಾಜ್ಯದ ನಿಯೋಗವು ಪಿಡಿಲೈಟ್‌ ಇಂಡಸ್ಟ್ರೀಸ್‌ನ ಮಾರಾಟ ಮುಖ್ಯಸ್ಥ ಸಂದೀಪ್‌ ಜೋಗ್ಲೆಕರ್‌ ಅವರ ಜೊತೆಗೂ ಸಮಾಲೋಚನೆ ನಡೆಸಿತು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಅವರು ಸಮಾಲೋಚನೆಗಳಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು