2:39 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದೇಶದಲ್ಲಿ ಪಿಎಫ್‌ಐ ನಿಷೇಧ: 5 ವರ್ಷಗಳ ಕಾಲ ಬ್ಯಾನ್; ಕೇಂದ್ರ ಸರಕಾರದಿಂದ ಆದೇಶ

28/09/2022, 14:21

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಪಿಎಫ್‌ಐ ಹಾಗೂಸ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಾದ ರೆಹಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ಎನ್‌ಸಿಎಚ್‌ಆರ್‌ಒ, ನ್ಯಾಷನಲ್‌ ವುಮೆನ್ಸ್‌ ಫ್ರಂಟ್‌ (ಎನ್‌ಡಬ್ಲ್ಯೂಎಫ್‌), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಸಂಘಟನೆಗಳನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಇತ್ತೀಚೆಗಷ್ಟೇ ಪಿಎಫ್‌ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಐಎನ್‌ಎ) ದಾಳಿ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು