12:43 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ದೇಶವನ್ನು ಮುಂದಕ್ಕೆ ಕರೆದೊಯ್ಯುವ ಸಮಯ ಬಂದಿದೆ: ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

15/08/2022, 10:15

ಹೊಸದಿಲ್ಲಿ(reporterkarnataka.com): ನಾವು ದೇಶವನ್ನು ಮುಂದಕ್ಕೆ ಕರೆದೊಯ್ಯುವ ಸಮಯ ಈಗ ಬಂದಿದೆ. ಪ್ರತಿ ತ್ಯಾಗವನ್ನೂ ಗೌರವಿಸುತ್ತೇವೆ. ಪ್ರತಿ ನಾಯಕರ ಕನಸನ್ನು ಈಡೇರಿಸುತ್ತೇವೆ. ಸ್ವಾತಂತ್ರ್ಯದ ಮಹೋತ್ಸವದ ವೇಳೆ ನಾವು ಅನೇಕ ರಾಷ್ಟ್ರೀಯ ನಾಯಕರನ್ನು ಸ್ಮರಿಸುತ್ತಿದ್ದೇವೆ. ಆಗಸ್ಟ್ 14ರಂದು ನಾವು ದೇಶ ವಿಭಜನೆಯ ಭಯಾನಕತೆಯನ್ನು ಸ್ಮರಿಸಿದ್ದೇವೆ. ಇಂದು ಕಳೆದ 75 ವರ್ಷಗಳಲ್ಲಿ ನಮ್ಮ ದೇಶವನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ಕೊಡುಗೆ ನೀಡಿದ ಎಲ್ಲ ನಾಗರಿಕರನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ರಾಜಧಾನಿ ದಿಲ್ಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಅವರು ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸೋಮವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕರ್ತವ್ಯದ ಹಾದಿಯಲ್ಲಿ ತಮ್ಮ ಪ್ರಾಣ ನೀಡಿದ ಬಾಪು, ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಬಾ ಸಾಹೇಬ್ ಅಂಬೇಡ್ಕರ್, ವೀರ್ ಸಾವರ್ಕರ್ ಮುಂತಾದವರನ್ನು ಭಾರತದ ನಾಗರಿಕರು ಸ್ಮರಿಸುತ್ತಾರೆ. ಕರ್ತವ್ಯದ ಪಥವೇ ಅವರ ಜೀವನದ ಪಥವಾಗಿತ್ತು ಎಂದು ಮೋದಿ ಹೇಳಿದ್ದಾರೆ.

ಬ್ರಿಟಿಷರ ಆಡಳಿತದ ವಿರುದ್ಧ ಬಂಡಾಯವೇಳದ ಜಾಗವೇ ಈ ದೇಶದಲ್ಲಿ ಇಲ್ಲ. ರಾಣಿ ಲಕ್ಷ್ಮೀಬಾಯಿ, ಝಲ್ಕಾರಿ ಭಾಯಿ, ಚೆನ್ನಮ್ಮ, ಬೇಗಂ ಹಜರತ್ ಮಹಲ್ ಇರಬಹುದು- ಭಾರತದ ಮಹಿಳೆಯರ ಶಕ್ತಿಯನ್ನು ನೆನಪಿಸಿಕೊಂಡಾಗ ಪ್ರತಿ ಭಾರತೀಯನೂ ಹೆಮ್ಮೆಪಟ್ಟುಕೊಳ್ಳುತ್ತಾರೆ. ಈ ದೇಶವು ಬ್ರಿಟಿಷರ ತಳಹದಿಯನ್ನು ಅಲುಗಾಡಿಸಿದ ಮಂಗಳ್ ಪಾಂಡೆ, ತಾತ್ಯಾ ಟೋಪೆ, ಭಗತ್ ಸಿಂಗ್, ಸುಖದೇವ್, ರಾಜಗುರು, ಚಂದ್ರಶೇಖರ್ ಆಜಾದ್, ಅಶ್ಫಾಕುಲ್ಲಾ ಖಾನ್, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ನಮ್ಮ ಅಸಂಖ್ಯಾತ ಕ್ರಾಂತಿಕಾರಿಗಳಿಗೆ ಕೃತಜ್ಞವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಅಥವಾ ಕಟ್ಟುವಲ್ಲಿ ಕೊಡುಗೆ ನೀಡಿದ ಡಾ. ರಾಜೇಂದ್ರ ಪ್ರಸಾದ್, ನೆಹರೂ, ಸರ್ದಾರ್ ಪಟೇಲ್, ಎಸ್‌ಪಿ ಮುಖರ್ಜಿ, ಲಾಲ್ ಬಹದ್ದೂರ್ ಶಾಸ್ತ್ರಿ, ದೀನ್‌ದಯಾಳ್ ಉಪಾಧ್ಯಾಯ, ಜೆಪಿ ನಾರಾಯಣ, ರಾಮ್ ಮನೋಹರ್ ಲೋಹಿಯಾ, ವಿನೋಬಾ ಭಾವೆ, ನಾನಾಜಿ ದೇಶ್‌ಮುಖ್, ಸುಬ್ರಮಣ್ಯ ಭಾರತಿ ಇರಬಹುದು- ಇಂದು ಅಂತಹ ಮಹಾನ್ ವ್ಯಕ್ತಿತ್ವಗಳಿಗೆ ತಲೆಬಾಗುವ ದಿನ ಎಂದರು.

ಕೆಂಪುಕೋಟೆಯಲ್ಲಿ ಗೌರವ ವಂದನೆ ಪಡೆದ ಪ್ರಧಾನಿ, 20 ಸಿಬ್ಬಂದಿಯನ್ನು ಒಳಗೊಂಡ ವಾಯುಪಡೆಯ ಬ್ಯಾಂಡ್‌ ರಾಷ್ಟ್ರಧ್ವಜವನ್ನು ನುಡಿಸುವಾಗ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. 


ಈ ವೇಳೆ ಸ್ಕ್ವಾಡ್ರನ್ ಲೀಡರ್ ಸುನೀತಾ ಯಾದವ್ ಅವರು ಪ್ರಧಾನಿಗೆ ಸಹಾಯ ಮಾಡಿದರು. ಎರಡು ಎಂಐ-17 IV ಹೆಲಿಕಾಪ್ಟರ್‌ಗಳ ಮೂಲಕ ಅಮೃತ್ ಫಾರ್ಮೇಷನ್ ಸ್ಥಳದಲ್ಲಿ ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಪ್ರಧಾನಿ ಮೋದಿ ಅವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು