1:55 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್

07/01/2025, 22:38

ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು ಧರ್ಮಸ್ಥಳ

info.reporterkarnataka@gmail.com

ದೇಶದಲ್ಲಿ ಸಮಗ್ರತೆ, ವೈವಿಧ್ಯತೆ, ಸೌಹಾರ್ದವನ್ನು ಉಳಿಸಿಕೊಳ್ಳಬೇಕಾಗಿದೆ.ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್ ಹೇಳಿದರು.
ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಸರತಿ ಸಾಲಿನ ಬದಲಿಗೆ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯ ಸದನ ಲೋಕಾರ್ಪಣೆ
ಮಾಡಿ ಅವರು ಮಾತನಾಡಿದರು.


ಸಾಮಾಜಿಕ ಸದ್ಭಾವ ಎಲ್ಲಿಂದ ಬರಬೇಕು ಎಂದು ಪ್ರಶ್ನಿಸಿದ ಉಪ ರಾಷ್ಟ್ರಪತಿಯವರು ಭಾರತ ಮಾತೆ ಒಂದೇ ಎಂದಾಗ ಈ ಭಾವನೆ ಬರುತ್ತದೆ. ನಾವು ದೇಶಕ್ಕಾಗಿ ಕೆಲಸ ಮಾಡಬೇಕಿದೆ, ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದರು.
ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ, ದೇಶದ ಸೇವೆಗಾಗಿ ಜನತೆ ಮುಂದೆ ಬರಬೇಕಿದೆ.


ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು, ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಅವರು ಮರೆಯಬಾರದು. ದಿನದ 24 ಗಂಟೆಯೂ ರಾಜಕಾರಣವೇ ಮುಖ್ಯವಾಗಿರಬೇಕೇ? ದೇಶ ಸೇವೆಗೆ ಸಮಯ ವಿನಿಯೋಗ ಮಾಡುತ್ತಿದ್ದಾರೆಯೇ ? ಎಂದು ಪ್ರಶ್ನಿಸಿದರು.
ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ, ಅತ್ಯುನ್ನತ ನಾಗರಿಕತೆ ನಮ್ಮದು ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಹುಟ್ಟಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.


ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಸಂಸದ ಕ್ಯಾ.ಬ್ರಿಜೇಶ್ ಚೌಟ ಮುಂತಾದವರು ಉಪಸ್ಥಿತರಿದ್ದರು.



ಸೇನಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಉಪ ರಾಷ್ಟ್ರಪತಿಯವರನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸ್ವಾಗತಿಸಿದರು. ನಂತರ ಹೆಲಿಕಾಪ್ಟರ್ ನಲ್ಲಿ ಉಪರಾಷ್ಟ್ರಪತಿ ಧರ್ಮಸ್ಥಳಕ್ಕೆ ತೆರಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು